ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ವಕೀಲನ ಬಂಧನ

Last Updated 5 ಜೂನ್ 2022, 6:55 IST
ಅಕ್ಷರ ಗಾತ್ರ

ಕನಕಪುರ: ಬಾಲಕನನ್ನು ಸಲಿಂಗ ಕಾಮಕ್ಕೆ ದುರ್ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ವಕೀಲ ಮತ್ತು ಆತನ ಸ್ನೇಹಿತನನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

ತಾಲ್ಲೂಕಿನ ಹಾರೋಹಳ್ಳಿ ಹೋಬಳಿ ಹಳೇಗಬ್ಬಾಡಿ ಗ್ರಾಮದ ವಾಸಿ, ವಕೀಲ ಶಂಕರೇಗೌಡ (43) ಮತ್ತು ಆತನ ಸ್ನೇಹಿತ ಅರುಣ್‌ ಬಂಧಿತರು.

ಶಂಕರೇಗೌಡ ಮೇ 19 ರಂದು ಕನಕಪುರ ಎಂ.ಜಿ.ರಸ್ತೆ ತಾಯಪ್ಪ ಗಲ್ಲಿಯ ಬಾಲಕನನ್ನು ಕಚೇರಿ ಸ್ಥಳಾಂತರಕ್ಕಾಗಿ ಕರೆದುಕೊಂಡು ಹೋಗಿದ್ದರು. ಅಂದಿನಿಂದ ಬಾಲಕ ನಾಪತ್ತೆಯಾಗಿದ್ದ. ಈ ಸಂಬಂಧ ಪೋಷಕರು ಕನಕಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಟೌನ್‌ ಪೊಲೀಸರು ಶಂಕರೇಗೌಡನನ್ನು ವಶಕ್ಕೆ ಪಡೆದು ವಿಚಾರಣೆಗೆ ನಡೆಸಿದಾಗ ಬಾಲಕನನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT