<p><strong>ಕನಕಪುರ:</strong> ಕ್ರೆಡಿಟ್ ಕಾರ್ಡ್ ಹಣ ವಸೂಲಿ ಮಾಡುವ ಏಜೆನ್ಸಿಯೊಂದರ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೆಎನ್ಎಸ್ ವೃತ್ತದಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಬಸವೇಶ್ವರ ನಗರದ ನಿವಾಸಿ ಸಂತೋಷ್ (41) ಆತ್ಮಹತ್ಯೆಗೆ ಶರಣಾದವರು. </p>.<p>ಹಲವು ಕ್ರೆಡಿಟ್ ಕಾರ್ಡ್ಗಳ ಮೂಲಕ ಸಾಲ ಪಡೆದಿದ್ದ ಸಂತೋಷ್ ಅವರಿಗೆ ಹಣ ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ವಸೂಲಿ ಏಜೆನ್ಸಿಯವರು ಮನೆಗೆ ಬಂದು ಗಲಾಟೆ ಮಾಡಿದ್ದರು. ಶೀಘ್ರ ಹಣ ಪಾವತಿಸುವಂತೆ ಎಚ್ಚರಿಕೆ ನೀಡಿ ಹೋಗಿದ್ದರು ಎಂದು ಸಂತೋಷ್ ಡೆತ್ನೋಟ್ನಲ್ಲಿ ತಿಳಿಸಿದ್ದಾರೆ.</p>.<p>‘ಭಾನುವಾರ ಮನೆಗೆ ಬರುತ್ತೇವೆ. ಅಂದು ಸಾಲ ಪಡೆದ ಪೂರ್ಣ ಹಣವನ್ನು ಮರುಪಾವತಿಸದಿದ್ದರೆ ಕತೆಯೇ ಬೇರೆ ಆಗುತ್ತದೆ’ ಎಂದು ಕರೆ ಮಾಡಿ ಎಚ್ಚರಿಕೆ ನೀಡಿದ್ದರು. ಇದರಿಂದ ಹೆದರಿದ್ದ ಸಂತೋಷ್ ಭಾನುವಾರ ಡೆತ್ ನೋಟು ಬರೆದಿಟ್ಟು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ಭಾನುವಾರ ಸಂತೋಷ್ ಮನೆಗೆ ಬಂದ ರಿಕವರಿ ಏಜೆನ್ಸಿ ಸಿಬ್ಬಂದಿ ಕೊಠಡಿ ಬಾಗಿಲು ಒಡೆದು ನೋಡಿದಾಗ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸಾಲ ವಸೂಲಾತಿಗೆ ಬಂದವರು ಪರಾರಿಯಾಗಿದ್ದಾರೆ. </p>.<p>‘ನನ್ನ ಗಂಡನ ಸಾವಿಗೆ ಸಾಲ ವಸೂಲಿ ಏಜೆನ್ಸಿ ಸಿಬ್ಬಂದಿ ಕಾರಣ. ಅವರ ಕಿರುಕುಳದಿಂದಲೇ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸಂತೋಷ್ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕ್ರೆಡಿಟ್ ಕಾರ್ಡ್ ಹಣ ವಸೂಲಿ ಮಾಡುವ ಏಜೆನ್ಸಿಯೊಂದರ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೆಎನ್ಎಸ್ ವೃತ್ತದಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಬಸವೇಶ್ವರ ನಗರದ ನಿವಾಸಿ ಸಂತೋಷ್ (41) ಆತ್ಮಹತ್ಯೆಗೆ ಶರಣಾದವರು. </p>.<p>ಹಲವು ಕ್ರೆಡಿಟ್ ಕಾರ್ಡ್ಗಳ ಮೂಲಕ ಸಾಲ ಪಡೆದಿದ್ದ ಸಂತೋಷ್ ಅವರಿಗೆ ಹಣ ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ವಸೂಲಿ ಏಜೆನ್ಸಿಯವರು ಮನೆಗೆ ಬಂದು ಗಲಾಟೆ ಮಾಡಿದ್ದರು. ಶೀಘ್ರ ಹಣ ಪಾವತಿಸುವಂತೆ ಎಚ್ಚರಿಕೆ ನೀಡಿ ಹೋಗಿದ್ದರು ಎಂದು ಸಂತೋಷ್ ಡೆತ್ನೋಟ್ನಲ್ಲಿ ತಿಳಿಸಿದ್ದಾರೆ.</p>.<p>‘ಭಾನುವಾರ ಮನೆಗೆ ಬರುತ್ತೇವೆ. ಅಂದು ಸಾಲ ಪಡೆದ ಪೂರ್ಣ ಹಣವನ್ನು ಮರುಪಾವತಿಸದಿದ್ದರೆ ಕತೆಯೇ ಬೇರೆ ಆಗುತ್ತದೆ’ ಎಂದು ಕರೆ ಮಾಡಿ ಎಚ್ಚರಿಕೆ ನೀಡಿದ್ದರು. ಇದರಿಂದ ಹೆದರಿದ್ದ ಸಂತೋಷ್ ಭಾನುವಾರ ಡೆತ್ ನೋಟು ಬರೆದಿಟ್ಟು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ಭಾನುವಾರ ಸಂತೋಷ್ ಮನೆಗೆ ಬಂದ ರಿಕವರಿ ಏಜೆನ್ಸಿ ಸಿಬ್ಬಂದಿ ಕೊಠಡಿ ಬಾಗಿಲು ಒಡೆದು ನೋಡಿದಾಗ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸಾಲ ವಸೂಲಾತಿಗೆ ಬಂದವರು ಪರಾರಿಯಾಗಿದ್ದಾರೆ. </p>.<p>‘ನನ್ನ ಗಂಡನ ಸಾವಿಗೆ ಸಾಲ ವಸೂಲಿ ಏಜೆನ್ಸಿ ಸಿಬ್ಬಂದಿ ಕಾರಣ. ಅವರ ಕಿರುಕುಳದಿಂದಲೇ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸಂತೋಷ್ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>