<p><strong>ಚನ್ನಪಟ್ಟಣ</strong>: ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಳಿತಲ್ಲಿಯೇ ಸಾವನ್ನಪ್ಪಿದ್ದಾರೆ.</p>.<p>ತಾಲ್ಲೂಕಿನ ಚನ್ನಂಕೇಗೌಡನದೊಡ್ಡಿ ಗ್ರಾಮದ ವಿನೋದ್ (35) ಮೃತಪಟ್ಟವರು. ಇವರು ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು, ಪ್ರತಿದಿನ ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಎಂದಿನಂತೆ ಮಂಗಳವಾರ ಕೆಲಸಕ್ಕೆಂದು ತೆರಳಲು ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಸ್ ಏರಿ ಕುಳಿತಿದ್ದಾರೆ. ಬಸ್ ನಿಲ್ದಾಣದಿಂದ ಹೊರಟು ಸ್ವಲ್ಪ ದೂರ ಹೋಗುವಷ್ಟರಲ್ಲಿ ಸೀಟಿನಲ್ಲಿಯೇ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.</p>.<p>ತಕ್ಷಣ ಸಹ ಪ್ರಯಾಣಿಕರು ಇವರನ್ನು ರಸ್ತೆ ಬದಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ. ಆ ನಂತರ ನಗರದ ಸರ್ಕಾರಿ ಆಸ್ಪತ್ರೆಗೆ ಮೃತದೇಹ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.</p>.<p>ಇವರಿಗೆ ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಳಿತಲ್ಲಿಯೇ ಸಾವನ್ನಪ್ಪಿದ್ದಾರೆ.</p>.<p>ತಾಲ್ಲೂಕಿನ ಚನ್ನಂಕೇಗೌಡನದೊಡ್ಡಿ ಗ್ರಾಮದ ವಿನೋದ್ (35) ಮೃತಪಟ್ಟವರು. ಇವರು ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು, ಪ್ರತಿದಿನ ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಎಂದಿನಂತೆ ಮಂಗಳವಾರ ಕೆಲಸಕ್ಕೆಂದು ತೆರಳಲು ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಸ್ ಏರಿ ಕುಳಿತಿದ್ದಾರೆ. ಬಸ್ ನಿಲ್ದಾಣದಿಂದ ಹೊರಟು ಸ್ವಲ್ಪ ದೂರ ಹೋಗುವಷ್ಟರಲ್ಲಿ ಸೀಟಿನಲ್ಲಿಯೇ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.</p>.<p>ತಕ್ಷಣ ಸಹ ಪ್ರಯಾಣಿಕರು ಇವರನ್ನು ರಸ್ತೆ ಬದಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ. ಆ ನಂತರ ನಗರದ ಸರ್ಕಾರಿ ಆಸ್ಪತ್ರೆಗೆ ಮೃತದೇಹ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.</p>.<p>ಇವರಿಗೆ ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>