ಮಂಚನಬೆಲೆ ನಿವಾಸಿಗಳ ಮನವಿ ಮೇರೆಗೆ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ತಿಪ್ಪಗೊಂಡನಹಳ್ಳಿ ಜಲಾಶಯ ದುರಸ್ತಿಗೊಳಿಸುವ ಸಲುವಾಗಿ ಇಲ್ಲಿನ ನೀರನ್ನು ಮಂಚನಬೆಲೆ ಜಲಾಶಯಕ್ಕೆ ತುಂಬಿಸಲಾಗಿದೆ. 86ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಹೆಚ್ಚುವರಿಯಾಗಿ ಎರಡು ಟ್ರಸ್ಟ್ ಗೇಟ್ಗಳ ಮೂಲಕ ನೀರು ಹೊರಗೆ ಹರಿಸಲಾಗುತ್ತಿದೆ. ಇದುವರೆಗೂ ಜಲಾಶಯ ದುರಸ್ತಿಗೊಳಿಸಿಲ್ಲ. ಗೋಡೆಗಳಲ್ಲಿ ದೊಡ್ಡ ಬಿರುಕುಗಳು ಕಾಣಿಸಿಕೊಂಡು ನೀರು ಜಿನುಗುತ್ತಿದೆ. ಈಗಲೇ ಎಚ್ಚೆತ್ತುಕೊಂಡು ದುರಸ್ತಿಗೊಳಿಸಬೇಕು. ಮಂಚನೆಬೆಲೆ ಜಲಾಶಯದ ನೀರು ಕಲುಷಿತಗೊಂಡಿದೆ. ಇದೇ ನೀರನ್ನು ಕುಡಿಯಲು ಸರಬರಾಜು ಮಾಡಲಾಗುತ್ತಿದೆ ಎಂದರು.