<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಮಂಗಾಡಹಳ್ಳಿಯಲ್ಲಿ ಶಿವರಾತ್ರಿ ಪ್ರಯುಕ್ತ ಭಾನುವಾರ ರಾತ್ರಿ ಗ್ರಾಮಸ್ಥರು ಚನ್ನಪ್ಪಾಜಿ ದೇವರಿಗೆ ಪದ್ಧತಿಯಂತೆ ಮಾಂಸಾಹಾರ ನೈವೇದ್ಯ ಮಾಡಿ ನಂತರ ನೂರಾರು ಭಕ್ತರು ಮಾಂಸಾಹಾರವನ್ನು ಪ್ರಸಾದವಾಗಿ ಸೇವಿಸಿದರು. </p>.<p>ಹಲವಾರು ವರ್ಷಗಳಿಂದ ಪ್ರತಿ ಶಿವರಾತ್ರಿಯ ದಿನ ಈ ಪದ್ಧತಿ ನಡೆದುಕೊಂಡು ಬರುತ್ತಿದೆ. <br> ಮಂಗಾಡಹಳ್ಳಿ, ವಿರುಪಾಕ್ಷಿಪುರ, ಬಲ್ಲಾಪಟ್ಟಣ, ಕೋಡಂಬಹಳ್ಳಿ, ಸೋಗಾಲ, ಅಕ್ಕೂರು, ಸಾದಾರಹಳ್ಳಿ, ಸೋಗಾಲ ಸೇರಿದಂತೆ ಸುತ್ತಮುತ್ತಲ ಹತ್ತಾರು ಗ್ರಾಮಗಳ ಭಕ್ತರು ಹಾಗೂ ಚನ್ನಾಪ್ಪಾಜಿ ಒಕ್ಕಲಿನವರು ಇಲ್ಲಿಗೆ ಬಂದು ಸೇವೆ ತೀರಿಸುವುದು ವಾಡಿಕೆ ಎಂದು ದೇವಾಲಯದ ಅರ್ಚಕ ಚನ್ನಪ್ಪ ತಿಳಿಸಿದರು.</p><p>ಭಕ್ತರು ಯಾವುದಾದರೂ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತು ಶಿವರಾತ್ರಿಯ ದಿನ ಹರಕೆ ತೀರಿಸುತ್ತಾರೆ. ನಂತರ ದೇವಸ್ಥಾನದ ಆವರಣದಲ್ಲೆ ಅಡುಗೆ ಮಾಡಿ ಬರುವ ಭಕ್ತರಿಗೆಲ್ಲಾ ಊಟ ಬಡಿಸುತ್ತಾರೆ. ಇಲ್ಲಿ ಸಾವಿರಕ್ಕೂ ಹೆಚ್ಚು ಭಕ್ತರು ಊಟ ಮಾಡುತ್ತಾರೆ. ತಡರಾತ್ರಿಯವರೆಗೂ ಈ ಸೇವೆ ನಡೆಯುತ್ತದೆ ಎಂದು ಗ್ರಾಮಸ್ಥರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಮಂಗಾಡಹಳ್ಳಿಯಲ್ಲಿ ಶಿವರಾತ್ರಿ ಪ್ರಯುಕ್ತ ಭಾನುವಾರ ರಾತ್ರಿ ಗ್ರಾಮಸ್ಥರು ಚನ್ನಪ್ಪಾಜಿ ದೇವರಿಗೆ ಪದ್ಧತಿಯಂತೆ ಮಾಂಸಾಹಾರ ನೈವೇದ್ಯ ಮಾಡಿ ನಂತರ ನೂರಾರು ಭಕ್ತರು ಮಾಂಸಾಹಾರವನ್ನು ಪ್ರಸಾದವಾಗಿ ಸೇವಿಸಿದರು. </p>.<p>ಹಲವಾರು ವರ್ಷಗಳಿಂದ ಪ್ರತಿ ಶಿವರಾತ್ರಿಯ ದಿನ ಈ ಪದ್ಧತಿ ನಡೆದುಕೊಂಡು ಬರುತ್ತಿದೆ. <br> ಮಂಗಾಡಹಳ್ಳಿ, ವಿರುಪಾಕ್ಷಿಪುರ, ಬಲ್ಲಾಪಟ್ಟಣ, ಕೋಡಂಬಹಳ್ಳಿ, ಸೋಗಾಲ, ಅಕ್ಕೂರು, ಸಾದಾರಹಳ್ಳಿ, ಸೋಗಾಲ ಸೇರಿದಂತೆ ಸುತ್ತಮುತ್ತಲ ಹತ್ತಾರು ಗ್ರಾಮಗಳ ಭಕ್ತರು ಹಾಗೂ ಚನ್ನಾಪ್ಪಾಜಿ ಒಕ್ಕಲಿನವರು ಇಲ್ಲಿಗೆ ಬಂದು ಸೇವೆ ತೀರಿಸುವುದು ವಾಡಿಕೆ ಎಂದು ದೇವಾಲಯದ ಅರ್ಚಕ ಚನ್ನಪ್ಪ ತಿಳಿಸಿದರು.</p><p>ಭಕ್ತರು ಯಾವುದಾದರೂ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತು ಶಿವರಾತ್ರಿಯ ದಿನ ಹರಕೆ ತೀರಿಸುತ್ತಾರೆ. ನಂತರ ದೇವಸ್ಥಾನದ ಆವರಣದಲ್ಲೆ ಅಡುಗೆ ಮಾಡಿ ಬರುವ ಭಕ್ತರಿಗೆಲ್ಲಾ ಊಟ ಬಡಿಸುತ್ತಾರೆ. ಇಲ್ಲಿ ಸಾವಿರಕ್ಕೂ ಹೆಚ್ಚು ಭಕ್ತರು ಊಟ ಮಾಡುತ್ತಾರೆ. ತಡರಾತ್ರಿಯವರೆಗೂ ಈ ಸೇವೆ ನಡೆಯುತ್ತದೆ ಎಂದು ಗ್ರಾಮಸ್ಥರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>