ರಾಮನಗರದ ಕೆಂಗಲ್ ಆಂಜನೇಯ ಸ್ವಾಮಿ ದೇಗುಲದ ಮುಂಭಾಗ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಮಾವು ಮಾರಾಟ ಮೇಳ ಆರಂಭಗೊಂಡಿದೆ. ಒಟ್ಟು 27 ಮಳಿಗೆಗಳಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ ನಡೆದಿದೆ. ಕಾರ್ಬೈಡ್ ಮುಕ್ತ , ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಮಾರಾಟಕ್ಕೆ ಇಡಲಾಗಿದೆ.