<p>ರಾಮನಗರ: ಜವಾಬ್ದಾರಿಯುತ ಐಪಿಎಸ್ ಅಧಿಕಾರಿಯ ಹುದ್ದೆಯಲ್ಲಿದ್ದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದ ಭಾಷೆ ಬಳಸಿರುವ ಚಂದ್ರಶೇಖರ್ ವಿರುದ್ಧ ಸಂಸತ್ತಿನಲ್ಲಿ ಹಕ್ಕು ಚ್ಯುತಿ ಮಂಡನೆ ಮಾಡಿ ಛೀಮಾರಿ ಹಾಕಬೇಕು ಎಂದು ಸಂಸದ ಡಾ.ಸಿ.ಎನ್ ಮಂಜುನಾಥ್ ಅಭಿಪ್ರಾಯಪಟ್ಟರು.</p>.<p>ರಾಮನಗರದ ಸಂಸದರ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಕೂಡ ಆರೋಪಿ ಎನ್ನುವ ಮೂಲಕ ನೇರವಾಗಿ ಅವರನ್ನು ಪ್ರಾಣಿಗೆ ಹೋಲಿಸಿದ್ದು ಖಂಡನೀಯ. ಇಂತಹ ಅಧಿಕಾರಿಯ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರ ಬಗ್ಗೆಯೇ ಈ ರೀತಿ ಮಾತನಾಡಿರುವ ಚಂದ್ರಶೇಖರ್ ಸಾಮಾನ್ಯ ಜನರ ಜೊತೆಗೆ ಹೇಗೆ ವರ್ತಿಸಬಹುದು ಎಂದು ಊಹಿಸಬಹುದು. ಚಂದ್ರಶೇಖರ್ ಪತ್ರದ ಹಿಂದೆ ಸರ್ಕಾರದ ಪಾತ್ರ ಇದೆಯಾ ಎಂದು ಸುದ್ದಿಗಾರರು ಕೇಳಿದ ಪ್ರರ್ಶನೆಗೆ ಉತ್ತರಿಸಿದ ಮಂಜುನಾಥ್, ಈ ಬಗ್ಗೆ ನನಗೆ ಮಾಹಿತಿ ಇಲ್ಲ, ಆದರೆ ಈ ಅನುಮಾನವನ್ನು ಕುಮಾರಸ್ವಾಮಿ ಅವರೂ ವ್ಯಕ್ತಪಡಿಸಿದ್ದಾರೆ. ಇದನ್ನು ಬಹಿರಂಗ ಮಾಡಲು ತನಿಖೆ ನಡೆಯಬೇಕು ಎಂದರು.</p><p><br> ಜಿಲ್ಲಾ ಬಿಜೆಪಿ ಅಧ್ಯಕ್ಷ ಆನಂದಸ್ವಾಮಿ ಹಾಗೂ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಜವಾಬ್ದಾರಿಯುತ ಐಪಿಎಸ್ ಅಧಿಕಾರಿಯ ಹುದ್ದೆಯಲ್ಲಿದ್ದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದ ಭಾಷೆ ಬಳಸಿರುವ ಚಂದ್ರಶೇಖರ್ ವಿರುದ್ಧ ಸಂಸತ್ತಿನಲ್ಲಿ ಹಕ್ಕು ಚ್ಯುತಿ ಮಂಡನೆ ಮಾಡಿ ಛೀಮಾರಿ ಹಾಕಬೇಕು ಎಂದು ಸಂಸದ ಡಾ.ಸಿ.ಎನ್ ಮಂಜುನಾಥ್ ಅಭಿಪ್ರಾಯಪಟ್ಟರು.</p>.<p>ರಾಮನಗರದ ಸಂಸದರ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಕೂಡ ಆರೋಪಿ ಎನ್ನುವ ಮೂಲಕ ನೇರವಾಗಿ ಅವರನ್ನು ಪ್ರಾಣಿಗೆ ಹೋಲಿಸಿದ್ದು ಖಂಡನೀಯ. ಇಂತಹ ಅಧಿಕಾರಿಯ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರ ಬಗ್ಗೆಯೇ ಈ ರೀತಿ ಮಾತನಾಡಿರುವ ಚಂದ್ರಶೇಖರ್ ಸಾಮಾನ್ಯ ಜನರ ಜೊತೆಗೆ ಹೇಗೆ ವರ್ತಿಸಬಹುದು ಎಂದು ಊಹಿಸಬಹುದು. ಚಂದ್ರಶೇಖರ್ ಪತ್ರದ ಹಿಂದೆ ಸರ್ಕಾರದ ಪಾತ್ರ ಇದೆಯಾ ಎಂದು ಸುದ್ದಿಗಾರರು ಕೇಳಿದ ಪ್ರರ್ಶನೆಗೆ ಉತ್ತರಿಸಿದ ಮಂಜುನಾಥ್, ಈ ಬಗ್ಗೆ ನನಗೆ ಮಾಹಿತಿ ಇಲ್ಲ, ಆದರೆ ಈ ಅನುಮಾನವನ್ನು ಕುಮಾರಸ್ವಾಮಿ ಅವರೂ ವ್ಯಕ್ತಪಡಿಸಿದ್ದಾರೆ. ಇದನ್ನು ಬಹಿರಂಗ ಮಾಡಲು ತನಿಖೆ ನಡೆಯಬೇಕು ಎಂದರು.</p><p><br> ಜಿಲ್ಲಾ ಬಿಜೆಪಿ ಅಧ್ಯಕ್ಷ ಆನಂದಸ್ವಾಮಿ ಹಾಗೂ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>