ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಲಸಿನಿಂದ ಹಲವು ಲಾಭ’

Last Updated 20 ಆಗಸ್ಟ್ 2019, 13:17 IST
ಅಕ್ಷರ ಗಾತ್ರ

ಮಾಗಡಿ: ‘ಹಲಸಿನ ಕಾಯಿ, ಹಣ್ಣು, ಬೀಜಗಳಿಂದ ಮೌಲ್ಯವರ್ಧಿತ ಪದಾರ್ಥಗಳನ್ನು ತಯಾರಿಸಿ ಮಹಿಳೆಯರು ಲಾಭ ಗಳಿಸಬಹುದು’ ಎಂದು ಕೃಷಿ ವಿಜ್ಞಾನ ಕೇಂದ್ರದ ಸಂಯೋಜಕಿ ಡಾ. ಲತಾ ಆರ್. ಕುಲಕರ್ಣಿ ತಿಳಿಸಿದರು.

ಇಲ್ಲಿನ ಹಲಸಬೆಲೆ ಗ್ರಾಮದಲ್ಲಿ ಮಂಗಳವಾರ ಕೆವಿಕೆ ವತಿಯಿಂದ ಗ್ರಾಮದ ಸ್ವಸಹಾಯ ಸಂಘಗಳ ಸದಸ್ಯರಿಗೆ ಹಲಸಿನಲ್ಲಿ ವಿವಿಧ ಮೌಲ್ಯವರ್ಧಿತ ಪದಾರ್ಥಗಳ ತಯಾರಿಕೆ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಗ್ರಾಮವನ್ನು ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಸ್ವಚ್ಛತೆ, ಆರೋಗ್ಯ, ಸಾಮಾಜಿಕ ನಿಲುವು ಮತ್ತು ಇತರೆ ವಿಭಾಗಗಳಲ್ಲಿ ಸ್ವಾವಲಂಬಿಯನ್ನಾಗಿ ಮಾಡಿ, ಇಡೀ ಜಿಲ್ಲೆಗೆ ಮಾದರಿಯಾಗಿಸಲು, ಕೃಷಿ ವಿಜ್ಞಾನ ಕೇಂದ್ರವು ಹಲಸಬೆಲೆ ಗ್ರಾಮವನ್ನು ದತ್ತು ತೆಗೆದುಕೊಂಡಿದೆ. ಹಲಸು ನಾರಿನಾಂಶ, ಬೀಟಾ ಕೆರೋಟಿನ್, ಖನಿಜ, ಲವಣಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿದ್ದು ಆರೋಗ್ಯಕ್ಕೆ ತುಂಬಾ ಒಳ್ಳೆಯದು’ ಎಂದು ತಿಳಿಸಿದರು.

ತೊಳೆ ಕತ್ತರಿಸುವ ಸಾಧನದ ಬಳಕೆಯನ್ನು ರೈತರಿಗೆಪ್ರಾತ್ಯಕ್ಷಿಕೆಯ ಮೂಲಕ ತೋರಿಸಿದರು. ಹಲಸಿನ ಉತ್ಪನ್ನಗಳ ಮಾರುಕಟ್ಟೆಗೆ ಅಗತ್ಯವಿರುವ ಲೈಸನ್ಸ್, ಪ್ಯಾಕಿಂಗ್ ಹಾಗೂ ಮಾರುಕಟ್ಟೆ ಸಂಪರ್ಕ ಕುರಿತು ಮಾಹಿತಿ ನೀಡಿದರು. ಹಲಸಬೆಲೆ ಗ್ರಾಮದ ಸ್ವಸಹಾಯ ಸಂಘಗಳ ಸದಸ್ಯರು, ರೈತ ಮಹಿಳೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT