ಕನಕಪುರ: ಬೆಟ್ಟೇಗೌಡನದೊಡ್ಡಿಯಲ್ಲಿ ರೈತರೊಬ್ಬರು ಮನೆ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ವಶಪಡಿಸಿಕೊಂಡರು.
ಮೂಗೇಗೌಡ ಎಂಬುವರು ಗಾಂಜಾ ಬೆಳೆದಿದ್ದು ತಲೆಮರೆಸಿಕೊಂಡಿದ್ದಾರೆ. ಕೋಡಿಹಳ್ಳಿ ಸಬ್ ಇನ್ಸ್ಪೆಕ್ಟರ್ ನಂಜುಂಡಸ್ವಾಮಿ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದು ತಲೆಮರೆಸಿಕೊಂಡಿರುವ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸಿಡಿಪಿಒ ಮಂಜುನಾಥ ಸಮಕ್ಷಮದಲ್ಲಿ ಗಾಂಜಾ ಬೆಳೆದಿದ್ದ ಸ್ಥಳವನ್ನು ಪರಿಶೀಲನೆ ನಡೆಸಲಾಯಿತು.