ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಕೆಲವು ಕಠಿಣ ನಿರ್ಬಂಧಗಳನ್ನು ವಿಧಿಸಿದೆ. ಈ ಮಧ್ಯೆಯೇ, ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನ ಆಗ್ರಹಿಸಿ ಕಾಂಗ್ರೆಸ್ ನಾಯಕರು ಜ. 9ರಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ.