ಕುದೂರು(ಮಾಗಡಿ): ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಗಾರ್ಮೆಂಟ್ಸ್ ಮ್ಯಾಕ್ಸಿ ಕ್ಯಾಬ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ರಾಷ್ಟ್ರೀಯ ಹೆದ್ದಾರಿ 75ರ ಮರೂರು ಹ್ಯಾಂಡ್ಪೋಸ್ಟ್ ಬಳಿ ಸರ್ವಿಸ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಮೃತ ಬಾಲಕ ಆಂಜನೇಯಸ್ವಾಮಿ ದೇವಾಲಯದ ಅರ್ಚಕ ಸೂರ್ಯನಾರಾಯಣ ಅವರ ಪುತ್ರ ಶಶಾಂಕ್(16) ಎಂದು ಗುರುತಿಸಲಾಗಿದೆ.