<p><strong>ರಾಮನಗರ:</strong> ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿಯು ರಾಜ್ಯ ಸರ್ಕಾರಕ್ಕೆ ₹ 1 ಕೋಟಿ ಮೌಲ್ಯದ ವೈದ್ಯಕೀಯ ಸಾಮಗ್ರಿಯನ್ನು ನೀಡಲಿದೆ.</p>.<p>ಈ ಕುರಿತು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವರ್ಚುಯಲ್ ಸಭೆ ಮೂಲಕ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಜತೆ ಶುಕ್ರವಾರ ಸಂಜೆ ಸಭೆ ನಡೆಸಿದರು. ರಾಮನಗರ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆಗೆ ಅಗತ್ಯವಾದ ನೆರವನ್ನು ಕಂಪನಿ ವತಿಯಿಂದ ನೀಡುವಂತೆ ಕೋರಿದರು.</p>.<p>ಇದಕ್ಕೆ ಸ್ಪಂದಿಸಿದ ಕಂಪನಿಯ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್, ವೈದ್ಯಕೀಯ ಸಾಮಗ್ರಿ ನೆರವು ನೀಡುವುದಾಗಿ ಒಪ್ಪಿದರು. ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಸಿಎಂ, ‘ಕೋವಿಡ್ ನಿರ್ವಹಣೆಯಲ್ಲಿ ಖಾಸಗಿ ಸಹಭಾಗಿತ್ವವನ್ನು ಹೆಚ್ಚಿಸುವ ಪ್ರಯತ್ನದ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ. ಟೊಯೊಟಾ ಕಿರ್ಲೋಸ್ಕರ್ ಕಡೆಯಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಮನಗರ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸಲು ಅವರ ನೆರವು ಕೇಳಿದ್ದೇವೆ’ ಎಂದರು.</p>.<p>ಮಾಗಡಿ ಮತ್ತು ಕನಕಪುರದಲ್ಲಿ ಆರ್ಟಿಪಿಸಿಆರ್ ಪರೀಕ್ಷಾ ಘಟಕಗಳ ಸ್ಥಾಪನೆ, ರಾಮನಗರ ಜಿಲ್ಲೆಗೆ 50 ವೆಂಟಿಲೇಟರ್ಗಳು ಮತ್ತು 50 ಪ್ಯಾರಾ ಮಲ್ಟಿ ಮಾನಿಟರ್ಗಳು, ಆಕ್ಸಿಜನ್ ಜನರೇಟರ್ಗಳು, 200 ಆಕ್ಸಿಜನ್ ಬೆಡ್ಗಳು ಬೇಕೆಂದು ನಾವು ಮನವಿ ಮಾಡಿದ್ದೇವೆ. ಈ ಎಲ್ಲ ಬೇಡಿಕೆಗಳಿಗೆ ಕಂಪನಿ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು.</p>.<p>ಬೆಂಗಳೂರಿನ ಎಂ.ಎಸ್. ರಾಮಯ್ಯ, ಮೈಸೂರು ರಸ್ತೆಯ ರಾಜರಾಜೇಶ್ವರಿ ಮತ್ತು ಕನಕಪುರದ ದಯಾನಂದ ಸಾಗರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳಿಗೆ ತುರ್ತಾಗಿ ಆಕ್ಸಿಜನ್ ಬೆಡ್ಗಳ ಅಗತ್ಯವಿದೆ. ಈ ಆಸ್ಪತ್ರೆಗಳಲ್ಲಿ ನುರಿತ ವೈದ್ಯಕೀಯ ಸಿಬ್ಬಂದಿ ಇದ್ದು, ಇಂಥ ಹಾಸಿಗೆಗಳ ಮೇಲೆ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಉತ್ತಮ ಚಿಕಿತ್ಸೆ ದೊರೆಯಲಿದೆ. ಸಾರ್ವಜನಿಕರಿಗೇ ಇಂಥ ಕಡೆ ಉತ್ತಮ ಚಿಕಿತ್ಸೆ ಕೊಡಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಟಿಕೆಎಂ ಅಧಿಕಾರಿ ಸಂದೀಪ್ ಶಾಂತಾರಾಮ ದಲ್ವಿ, ಬಿಡದಿ ಕೈಗಾರಿಕಾ ಸಂಘದ ರಾಜೇಂದ್ರ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿಯು ರಾಜ್ಯ ಸರ್ಕಾರಕ್ಕೆ ₹ 1 ಕೋಟಿ ಮೌಲ್ಯದ ವೈದ್ಯಕೀಯ ಸಾಮಗ್ರಿಯನ್ನು ನೀಡಲಿದೆ.</p>.<p>ಈ ಕುರಿತು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವರ್ಚುಯಲ್ ಸಭೆ ಮೂಲಕ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಜತೆ ಶುಕ್ರವಾರ ಸಂಜೆ ಸಭೆ ನಡೆಸಿದರು. ರಾಮನಗರ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆಗೆ ಅಗತ್ಯವಾದ ನೆರವನ್ನು ಕಂಪನಿ ವತಿಯಿಂದ ನೀಡುವಂತೆ ಕೋರಿದರು.</p>.<p>ಇದಕ್ಕೆ ಸ್ಪಂದಿಸಿದ ಕಂಪನಿಯ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್, ವೈದ್ಯಕೀಯ ಸಾಮಗ್ರಿ ನೆರವು ನೀಡುವುದಾಗಿ ಒಪ್ಪಿದರು. ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಸಿಎಂ, ‘ಕೋವಿಡ್ ನಿರ್ವಹಣೆಯಲ್ಲಿ ಖಾಸಗಿ ಸಹಭಾಗಿತ್ವವನ್ನು ಹೆಚ್ಚಿಸುವ ಪ್ರಯತ್ನದ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ. ಟೊಯೊಟಾ ಕಿರ್ಲೋಸ್ಕರ್ ಕಡೆಯಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಮನಗರ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸಲು ಅವರ ನೆರವು ಕೇಳಿದ್ದೇವೆ’ ಎಂದರು.</p>.<p>ಮಾಗಡಿ ಮತ್ತು ಕನಕಪುರದಲ್ಲಿ ಆರ್ಟಿಪಿಸಿಆರ್ ಪರೀಕ್ಷಾ ಘಟಕಗಳ ಸ್ಥಾಪನೆ, ರಾಮನಗರ ಜಿಲ್ಲೆಗೆ 50 ವೆಂಟಿಲೇಟರ್ಗಳು ಮತ್ತು 50 ಪ್ಯಾರಾ ಮಲ್ಟಿ ಮಾನಿಟರ್ಗಳು, ಆಕ್ಸಿಜನ್ ಜನರೇಟರ್ಗಳು, 200 ಆಕ್ಸಿಜನ್ ಬೆಡ್ಗಳು ಬೇಕೆಂದು ನಾವು ಮನವಿ ಮಾಡಿದ್ದೇವೆ. ಈ ಎಲ್ಲ ಬೇಡಿಕೆಗಳಿಗೆ ಕಂಪನಿ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು.</p>.<p>ಬೆಂಗಳೂರಿನ ಎಂ.ಎಸ್. ರಾಮಯ್ಯ, ಮೈಸೂರು ರಸ್ತೆಯ ರಾಜರಾಜೇಶ್ವರಿ ಮತ್ತು ಕನಕಪುರದ ದಯಾನಂದ ಸಾಗರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳಿಗೆ ತುರ್ತಾಗಿ ಆಕ್ಸಿಜನ್ ಬೆಡ್ಗಳ ಅಗತ್ಯವಿದೆ. ಈ ಆಸ್ಪತ್ರೆಗಳಲ್ಲಿ ನುರಿತ ವೈದ್ಯಕೀಯ ಸಿಬ್ಬಂದಿ ಇದ್ದು, ಇಂಥ ಹಾಸಿಗೆಗಳ ಮೇಲೆ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಉತ್ತಮ ಚಿಕಿತ್ಸೆ ದೊರೆಯಲಿದೆ. ಸಾರ್ವಜನಿಕರಿಗೇ ಇಂಥ ಕಡೆ ಉತ್ತಮ ಚಿಕಿತ್ಸೆ ಕೊಡಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಟಿಕೆಎಂ ಅಧಿಕಾರಿ ಸಂದೀಪ್ ಶಾಂತಾರಾಮ ದಲ್ವಿ, ಬಿಡದಿ ಕೈಗಾರಿಕಾ ಸಂಘದ ರಾಜೇಂದ್ರ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>