<p><strong>ಕನಕಪುರ</strong>: ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಕೆಬ್ಬೇದೊಡ್ಡಿ ಬಳಿಯಿರುವ ಪಿರಮಿಡ್ ವ್ಯಾಲಿಯಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಮೂರು ದಿನಗಳ ಕಾಲ ನಡೆಯುವ ಕರ್ನಾಟಕ ಧ್ಯಾನ ಮಹಾಯಜ್ಞ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.</p>.<p>ಪರಿಮಳಾ ಪತ್ರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಪಾರಿಪತ್ರಿ, ಎಸ್.ಪಿ. ಗಣೇಶ್ಕುಮಾರ್, ಗಿರಿಜಾ ರಾಜನ್, ರಜಿತ, ಕೋಟೇಶ್ವರ್ ರಾವ್ ಪಾಲ್ಗೊಂಡಿದ್ದರು.</p>.<p>ಇಲ್ಲಿನ ಪಿರಮಿಡ್ ವ್ಯಾಲಿಯು ಅಂತರಾಷ್ಟ್ರೀಯ ಮಟ್ಟದ ಧ್ಯಾನ ಕೇಂದ್ರವಾಗಿದ್ದು ದೇಶ ಮತ್ತು ವಿದೇಶಗಳಿಂದ ಧ್ಯಾನಾಸಕ್ತರು ಬರುತ್ತಾರೆ. ಮೇ 16ರಂದು ಮುಕ್ತಾಯವಾಲಿದೆ.</p>.<p>ಮೂರು ದಿನಗಳ ಕಾಲ ನಡೆಯುವ ಧ್ಯಾನ, ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಿಎಂಸಿ ನಡೆಸಿಕೊಡುತ್ತಿದೆ. ಬ್ರಹ್ಮಶ್ರೀ ಪತ್ರೀಜಿ 1990ರಲ್ಲಿ ವಿಶ್ವದಲ್ಲೇ ಅತಿದೊಡ್ಡ ಧ್ಯಾನ ಮಂದಿರವನ್ನು ಇಲ್ಲಿ ನಿರ್ಮಾಣ ಮಾಡಿದ್ದು ಪ್ರತಿವರ್ಷ ಬುದ್ಧ ಪೂರ್ಣಿಮೆಯಂದು ಅಂತರರಾಷ್ಟ್ರೀಯ ಮಟ್ಟದ ಧ್ಯಾನ ಕಾರ್ಯಕ್ರಮವನ್ನು ನಡೆಸಿ ಕೊಡುತ್ತಿದ್ದಾರೆ.</p>.<p>ಭಾನುವಾರ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮಂತ್ರಾಲಯದ ಸುಬುಧೇಂದ್ರ ತೀರ್ಥ ಸ್ವಾಮೀಜಿ, ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ, ದೆಹಲಿಯ ಡಾ.ಅಶೋಕ್ ದಳವಾಯಿ ಪಾಲ್ಗೊಳ್ಳಲಿದ್ದಾರೆ.</p>.<p>ಸೋಮವಾರ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಗೃಹ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಕೆಬ್ಬೇದೊಡ್ಡಿ ಬಳಿಯಿರುವ ಪಿರಮಿಡ್ ವ್ಯಾಲಿಯಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಮೂರು ದಿನಗಳ ಕಾಲ ನಡೆಯುವ ಕರ್ನಾಟಕ ಧ್ಯಾನ ಮಹಾಯಜ್ಞ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.</p>.<p>ಪರಿಮಳಾ ಪತ್ರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಪಾರಿಪತ್ರಿ, ಎಸ್.ಪಿ. ಗಣೇಶ್ಕುಮಾರ್, ಗಿರಿಜಾ ರಾಜನ್, ರಜಿತ, ಕೋಟೇಶ್ವರ್ ರಾವ್ ಪಾಲ್ಗೊಂಡಿದ್ದರು.</p>.<p>ಇಲ್ಲಿನ ಪಿರಮಿಡ್ ವ್ಯಾಲಿಯು ಅಂತರಾಷ್ಟ್ರೀಯ ಮಟ್ಟದ ಧ್ಯಾನ ಕೇಂದ್ರವಾಗಿದ್ದು ದೇಶ ಮತ್ತು ವಿದೇಶಗಳಿಂದ ಧ್ಯಾನಾಸಕ್ತರು ಬರುತ್ತಾರೆ. ಮೇ 16ರಂದು ಮುಕ್ತಾಯವಾಲಿದೆ.</p>.<p>ಮೂರು ದಿನಗಳ ಕಾಲ ನಡೆಯುವ ಧ್ಯಾನ, ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಿಎಂಸಿ ನಡೆಸಿಕೊಡುತ್ತಿದೆ. ಬ್ರಹ್ಮಶ್ರೀ ಪತ್ರೀಜಿ 1990ರಲ್ಲಿ ವಿಶ್ವದಲ್ಲೇ ಅತಿದೊಡ್ಡ ಧ್ಯಾನ ಮಂದಿರವನ್ನು ಇಲ್ಲಿ ನಿರ್ಮಾಣ ಮಾಡಿದ್ದು ಪ್ರತಿವರ್ಷ ಬುದ್ಧ ಪೂರ್ಣಿಮೆಯಂದು ಅಂತರರಾಷ್ಟ್ರೀಯ ಮಟ್ಟದ ಧ್ಯಾನ ಕಾರ್ಯಕ್ರಮವನ್ನು ನಡೆಸಿ ಕೊಡುತ್ತಿದ್ದಾರೆ.</p>.<p>ಭಾನುವಾರ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮಂತ್ರಾಲಯದ ಸುಬುಧೇಂದ್ರ ತೀರ್ಥ ಸ್ವಾಮೀಜಿ, ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ, ದೆಹಲಿಯ ಡಾ.ಅಶೋಕ್ ದಳವಾಯಿ ಪಾಲ್ಗೊಳ್ಳಲಿದ್ದಾರೆ.</p>.<p>ಸೋಮವಾರ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಗೃಹ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>