ಬಳಿಕ ಮಾತನಾಡಿದ ಅವರು, ‘ನಾವು ಯಾವುದೇ ಒಳ್ಳೆಯ ಕೆಲಸ ಮಾಡುವಾಗ ದೇವರ ಪೂಜೆ ಸಲ್ಲಿಸುತ್ತೇವೆ. ಅದೇ ಕಾರಣದಿಂದ ಮನೆ ದೇವರಿಗೆ ಪೂಜೆ ಸಲ್ಲಿಸಿ, ಮಸೀದಿ, ಚರ್ಚ್ಗಳಿಗೂ ಭೇಟಿ ನೀಡಿ ಪ್ರಾರ್ಥನೆ ಮಾಡಿದ್ದೇನೆ. ದೇವರ ದರ್ಶನ ಮಾಡಲು ಬೆಟ್ಟದ ಮೇಲಕ್ಕೆ ನಡೆದುಕೊಂಡು ಹೋಗುತ್ತೇವೆ. ಅದೇ ರೀತಿ ಕಾವೇರಮ್ಮನ ಆಶೀರ್ವಾದ ಪಡೆಯಲು ಪಾದಯಾತ್ರೆ ಮಾಡುತ್ತಿದ್ದೇವೆ’ ಎಂದರು.