‘ಆಯೋಗದಿಂದ ಒಪ್ಪಿಗೆ ಸಿಕ್ಕಿದ ಕೂಡಲೇ ಯೋಜನೆ ಕಾಮಗಾರಿ ಆರಂಭ ಮಾಡಲಾಗುವುದು. ಈ ಯೋಜನೆಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಇದು ಅಗತ್ಯವಾದ ಯೋಜನೆ. ಈ ಯೋಜನೆಯನ್ನು ನೆರೆ ರಾಜ್ಯ ವಿರೋಧಿಸುವುದು ಸರಿಯಲ್ಲ. ಯಾರು ವಿರೋಧ ಮಾಡಿದರೂ ಯೋಜನೆ ನಿಲ್ಲುವುದೂ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.