ಎರಡನೇ ದಿನ ಪಾದಯಾತ್ರೆಯಲ್ಲಿ ಹಿರಿಯ ನಾಯಕರು ಕಾಣಿಸಿಕೊಳ್ಳಲಿಲ್ಲ. ಸಿದ್ದರಾಮಯ್ಯ ಸಹ ಅನಾರೋಗ್ಯದ ಕಾರಣ ಹಿಂದೆ ಸರಿದರು. ಪಕ್ಷದ ಮುಖಂಡರಾದ ಈಶ್ವರ ಖಂಡ್ರೆ, ವಿನಯ ಕುಲಕರ್ಣಿ , ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್, ಮಾಜಿ ಸಚಿವೆ ಉಮಾಶ್ರೀ , ಶಾಸಕ ನರೇಂದ್ರ ಸ್ವಾಮಿ ಸೇರಿದಂತೆ ಕೆಲವು ಪ್ರಮುಖರಷ್ಟೇ ಹೆಜ್ಜೆ ಹಾಕುತ್ತಿದ್ದಾರೆ.