<p>ರಾಮನಗರ: ನರೇಗಾ ಯೋಜನೆಯ ತಾಂತ್ರಿಕ ಎಂಜಿನಿಯರ್ ರೋಹಿತ್ ಗೌಡ ಮೇಲಿನ ಹಲ್ಲೆ ಖಂಡಿಸಿ ಹಾಗೂ ನರೇಗಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕರ್ತವ್ಯ ಸಮಯದಲ್ಲಿ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿ ಸೋಮವಾರ ನರೇಗಾ ವಿಭಾಗದ ಸಿಬ್ಬಂದಿ ಪ್ರತಿಭಟನೆ<br />ನಡೆಸಿದರು.</p>.<p>ಕಪ್ಪುಪಟ್ಟಿ ಧರಿಸಿ ನಗರದ ಜಿಲ್ಲಾ ಪಂಚಾಯಿತಿ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು. ನಂತರ ಜಿ.ಪಂ. ಸಿಇಒ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ, ಡಿವೈಎಸ್ಪಿ ಮೋಹನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಕನಕಪುರ ತಾಲ್ಲೂಕಿನ ತುಂಗಣಿ ಗ್ರಾ.ಪಂ.ನಲ್ಲಿ ತಾಂತ್ರಿಕ ಸಹಾಯಕ ಎಂಜಿನಿಯರ್ ಆಗಿರುವ ರೋಹಿತ್ಗೌಡ ಡಿ. 31ರಂದು ಪಿ. ರಾಂಪುರ ಗ್ರಾಮದ ಪ್ರಸಾದ್ ಎಂಬ ವ್ಯಕ್ತಿಯ ಕುರಿ ಶೆಡ್ ಕಾಮಗಾರಿಯ ಅಳತೆ ಮಾಡಲು ತೆರಳಿದ್ದರು. ಈ ಸಂದರ್ಭದಲ್ಲಿ ಪ್ರಸಾದ್ ಬೇರೆ ಸ್ಥಳದಲ್ಲಿ ಅಳತೆ<br />ಮಾಡಿ, ಅಳತೆ ಪುಸ್ತಕದಲ್ಲಿ ದಾಖಲು ಮಾಡಿ ಕೊಡುವಂತೆ ರೋಹಿತ್ ಗೌಡಗೆ ಒತ್ತಾಯಿಸಿದ್ದರು. ಆದರೆ, ಇದಕ್ಕೆ ನಿರಾಕರಿಸಿದ್ದರಿಂದ ರೋಹಿತ್ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ದೈಹಿಕವಾಗಿ ಹಲ್ಲೆ ಮಾಡಿದ್ದರಿಂದ ಕೈಮೂಳೆ ಮುರಿದಿದ್ದು, ಸಾಕಷ್ಟು ತೊಂದರೆಯಾಗಿದೆ ಎಂದು ಆರೋಪಿಸಿದರು.</p>.<p>ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ನರೇಗಾದಡಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಆದರೆ, ಯೋಜನೆಯನ್ನು ದುರುಪಯೋಗ ಪಡಿಸಿಕೊಂಡು ಹಣ ಮಾಡಲು ಮುಂದಾಗಿರುವ ಕೆಲ ಕಿಡಿಕೇಡಿಗಳು ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾಮಗಾರಿ ಸ್ಥಳ ಪರಿಶೀಲನೆಗೆ ಮುಂದಾದಾಗ, ಅಕ್ರಮಗಳಿಗೆ ಸಹಕಾರ ನೀಡದಂತಹ<br />ಸಂದರ್ಭದಲ್ಲಿ ಅವರಿಗೆ ಬೆದರಿಕೆ ಹಾಕುವುದು, ಹಲ್ಲೆ ಮಾಡುವುದು ಕಂಡುಬರುತ್ತಿದೆ ಎಂದು ದೂರಿದರು.</p>.<p class="Subhead">ಬೇಡಿಕೆಗಳು: ನೌಕರರು ಕರ್ತವ್ಯದ ವೇಳೆ ಮೃತಪಟ್ಟಲ್ಲಿ ಸಿಬ್ಬಂದಿಗೆ ₹10 ಲಕ್ಷ ಪರಿಹಾರ ನೀಡಬೇಕು. ಅನುಕಂಪದ ಆಧಾರದ ಮೇಲೆ ಕೆಲಸವನ್ನು ನೀಡಬೇಕು. ಕರ್ತವ್ಯದಲ್ಲಿರುವಾಗ ಸಿಬ್ಬಂದಿ ಮೇಲೆ ಹಲ್ಲೆ, ರಸ್ತೆ ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಸಿಬ್ಬಂದಿಯ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಮಹಿಳಾ ನೌಕರರಿಗೆ ಸಂಜೆ 6 ಗಂಟೆ ನಂತರ ತುರ್ತು<br />ಹೊರತುಪಡಿಸಿ ಕಚೇರಿಯಲ್ಲಿ ಇರಿಸಿಕೊಳ್ಳದಂತೆ ಸೂಚನೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ<br />ಮಾಡಿದರು.</p>.<p>ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಡಿಪಿಸಿ ಜಿಲ್ಲಾ ಮತ್ತು ತಾಲ್ಲೂಕು ಎಂ.ಐ.ಎಸ್. ಸಂಯೋಜಕರು, ಜಿಲ್ಲಾ ಮತ್ತು ತಾಲ್ಲೂಕು ಐ.ಇ.ಸಿ. ಸಂಯೋಜಕರು, ತಾಂತ್ರಿಕ ಸಹಾಯಕ ಎಂಜಿನಿಯರ್ಗಳು, ಜಿಲ್ಲಾ ಮತ್ತು ತಾಲ್ಲೂಕು ಗಣಕ ಯಂತ್ರ ನಿರ್ವಾಹಕರು, ಬಿ.ಎಫ್.ಟಿಗಳು, ಗ್ರಾಮ ಕಾಯಕ ಮಿತ್ರರು<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ನರೇಗಾ ಯೋಜನೆಯ ತಾಂತ್ರಿಕ ಎಂಜಿನಿಯರ್ ರೋಹಿತ್ ಗೌಡ ಮೇಲಿನ ಹಲ್ಲೆ ಖಂಡಿಸಿ ಹಾಗೂ ನರೇಗಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕರ್ತವ್ಯ ಸಮಯದಲ್ಲಿ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿ ಸೋಮವಾರ ನರೇಗಾ ವಿಭಾಗದ ಸಿಬ್ಬಂದಿ ಪ್ರತಿಭಟನೆ<br />ನಡೆಸಿದರು.</p>.<p>ಕಪ್ಪುಪಟ್ಟಿ ಧರಿಸಿ ನಗರದ ಜಿಲ್ಲಾ ಪಂಚಾಯಿತಿ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು. ನಂತರ ಜಿ.ಪಂ. ಸಿಇಒ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ, ಡಿವೈಎಸ್ಪಿ ಮೋಹನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಕನಕಪುರ ತಾಲ್ಲೂಕಿನ ತುಂಗಣಿ ಗ್ರಾ.ಪಂ.ನಲ್ಲಿ ತಾಂತ್ರಿಕ ಸಹಾಯಕ ಎಂಜಿನಿಯರ್ ಆಗಿರುವ ರೋಹಿತ್ಗೌಡ ಡಿ. 31ರಂದು ಪಿ. ರಾಂಪುರ ಗ್ರಾಮದ ಪ್ರಸಾದ್ ಎಂಬ ವ್ಯಕ್ತಿಯ ಕುರಿ ಶೆಡ್ ಕಾಮಗಾರಿಯ ಅಳತೆ ಮಾಡಲು ತೆರಳಿದ್ದರು. ಈ ಸಂದರ್ಭದಲ್ಲಿ ಪ್ರಸಾದ್ ಬೇರೆ ಸ್ಥಳದಲ್ಲಿ ಅಳತೆ<br />ಮಾಡಿ, ಅಳತೆ ಪುಸ್ತಕದಲ್ಲಿ ದಾಖಲು ಮಾಡಿ ಕೊಡುವಂತೆ ರೋಹಿತ್ ಗೌಡಗೆ ಒತ್ತಾಯಿಸಿದ್ದರು. ಆದರೆ, ಇದಕ್ಕೆ ನಿರಾಕರಿಸಿದ್ದರಿಂದ ರೋಹಿತ್ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ದೈಹಿಕವಾಗಿ ಹಲ್ಲೆ ಮಾಡಿದ್ದರಿಂದ ಕೈಮೂಳೆ ಮುರಿದಿದ್ದು, ಸಾಕಷ್ಟು ತೊಂದರೆಯಾಗಿದೆ ಎಂದು ಆರೋಪಿಸಿದರು.</p>.<p>ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ನರೇಗಾದಡಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಆದರೆ, ಯೋಜನೆಯನ್ನು ದುರುಪಯೋಗ ಪಡಿಸಿಕೊಂಡು ಹಣ ಮಾಡಲು ಮುಂದಾಗಿರುವ ಕೆಲ ಕಿಡಿಕೇಡಿಗಳು ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾಮಗಾರಿ ಸ್ಥಳ ಪರಿಶೀಲನೆಗೆ ಮುಂದಾದಾಗ, ಅಕ್ರಮಗಳಿಗೆ ಸಹಕಾರ ನೀಡದಂತಹ<br />ಸಂದರ್ಭದಲ್ಲಿ ಅವರಿಗೆ ಬೆದರಿಕೆ ಹಾಕುವುದು, ಹಲ್ಲೆ ಮಾಡುವುದು ಕಂಡುಬರುತ್ತಿದೆ ಎಂದು ದೂರಿದರು.</p>.<p class="Subhead">ಬೇಡಿಕೆಗಳು: ನೌಕರರು ಕರ್ತವ್ಯದ ವೇಳೆ ಮೃತಪಟ್ಟಲ್ಲಿ ಸಿಬ್ಬಂದಿಗೆ ₹10 ಲಕ್ಷ ಪರಿಹಾರ ನೀಡಬೇಕು. ಅನುಕಂಪದ ಆಧಾರದ ಮೇಲೆ ಕೆಲಸವನ್ನು ನೀಡಬೇಕು. ಕರ್ತವ್ಯದಲ್ಲಿರುವಾಗ ಸಿಬ್ಬಂದಿ ಮೇಲೆ ಹಲ್ಲೆ, ರಸ್ತೆ ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಸಿಬ್ಬಂದಿಯ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಮಹಿಳಾ ನೌಕರರಿಗೆ ಸಂಜೆ 6 ಗಂಟೆ ನಂತರ ತುರ್ತು<br />ಹೊರತುಪಡಿಸಿ ಕಚೇರಿಯಲ್ಲಿ ಇರಿಸಿಕೊಳ್ಳದಂತೆ ಸೂಚನೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ<br />ಮಾಡಿದರು.</p>.<p>ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಡಿಪಿಸಿ ಜಿಲ್ಲಾ ಮತ್ತು ತಾಲ್ಲೂಕು ಎಂ.ಐ.ಎಸ್. ಸಂಯೋಜಕರು, ಜಿಲ್ಲಾ ಮತ್ತು ತಾಲ್ಲೂಕು ಐ.ಇ.ಸಿ. ಸಂಯೋಜಕರು, ತಾಂತ್ರಿಕ ಸಹಾಯಕ ಎಂಜಿನಿಯರ್ಗಳು, ಜಿಲ್ಲಾ ಮತ್ತು ತಾಲ್ಲೂಕು ಗಣಕ ಯಂತ್ರ ನಿರ್ವಾಹಕರು, ಬಿ.ಎಫ್.ಟಿಗಳು, ಗ್ರಾಮ ಕಾಯಕ ಮಿತ್ರರು<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>