<p><strong>ರಾಮನಗರ</strong>: ‘ಅಮೂಲ್ಯವಾದ ಜಾನಪದ ಕಲೆಗಳನ್ನು ಉಳಿಸುವ ಕೆಲಸಗಳಾಗಬೇಕು. ಆ ನಿಟ್ಟಿನಲ್ಲಿ ಜಾನಪದ ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಲು ಸರ್ಕಾರ ಅಗತ್ಯ ಪ್ರೋತ್ಸಾಹ ನೀಡುತ್ತಿದೆ. ಇದನ್ನೇ ಮನಗಂಡು ಎಚ್.ಎಲ್. ನಾಗೇಗೌಡರು ಜಾನಪದ ಲೋಕ ಕಟ್ಟಿದ್ದಾರೆ. ಲೋಕದ ಬೆಳವಣಿಗೆ ಎಲ್ಲರ ಜವಾಬ್ದಾರಿ. ಇಲ್ಲಿಗೆ ಅಗತ್ಯವಿರುವ ಅನುದಾನ ಒದಗಿಸಲು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗರೆಡ್ಡಿ ಭರವಸೆ ನೀಡಿದರು.</p>.<p>ನಗರದ ಜಾನಪದ ಲೋಕದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಆಯೋಜಿಸಿರುವ ಎರಡು ದಿನಗಳ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ’ದ ಕಡೆಯ ದಿನವಾದ ಭಾನುವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಾನಪದ ವಿದ್ವಾಂಸರು ಹಾಗೂ ಕಲಾವಿದರಿಗೆ ‘ಜಾನಪದ ಲೋಕ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಪ್ರತಿ ವರ್ಷ ಬಜೆಟ್ ಮಂಡಿಸುವ ಮುನ್ನ ಮುಖ್ಯಮಂತ್ರಿ ಅವರು ಎಲ್ಲಾ ಸಚಿವರನ್ನು ಕರೆದು ಖರ್ಚು ವೆಚ್ಚಗಳ ಬಗ್ಗೆ ಅಗತ್ಯವಿರುವ ಅನುದಾನಗಳ ಬಗ್ಗೆ ಆಲಿಸುತ್ತಾರೆ. ಜಾನಪದ ಲೋಕದವರು ಈ ರೀತಿಯ ಕಾರ್ಯಕ್ರಮಗಳಿಗೆ ಅನುದಾನ ಬೇಕಾಗಿದೆ ಎಂದು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾನು ಗಮನ ಹರಿಸುವೆ’ ಎಂದರು.</p>.<p>‘ಜಾನಪದ ಎಂಬುದು ಗ್ರಾಮೀಣ ಕಲೆಯಾಗಿದೆ. ಕಾಡಲ್ಲಿ ವಾಸಿಸುವ ಬುಡಕಟ್ಟು ಜನರ ಕಲೆ, ಸೋಲಿಗರ ಕಲೆ ಸೇರಿದಂತೆ ಇತರೆ ಕಲೆಗಳನ್ನು ಉಳಿಸುವಂತಹ ಕೆಲಸಗಳಾಗಬೇಕಾಗಿದೆ. ಕಲೆಗಳ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕು. ಜಾನಪದ ಲೋಕವು ಇನ್ನಷ್ಟು ಬೆಳೆಯಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ. ಚಿ. ಬೋರಲಿಂಗಯ್ಯ, ಆಡಳಿತ ಮಂಡಳಿ ಸದಸ್ಯರಾದ ವೇಮಗಲ್ ನಾರಾಯಣಸ್ವಾಮಿ, ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಹಾಗೂ ಇತರರು ಇದ್ದರು.</p>.<p><strong>ಸಂವಾದ:</strong> ಲೋಕೋತ್ಸವ ಪ್ರಯುಕ್ತ ಬೆಳಿಗ್ಗೆ 10.30ಕ್ಕೆ ‘ಯುವಜನರಲ್ಲಿ ಜಾನಪದ ಗಾಯನ ಮತ್ತು ಕಲೆಗಳ ಸಂವರ್ಧನೆ’ ಎಂಬ ವಿಷಯ ಕುರಿತು ಚರ್ಚೆ-ಸಂವಾದ ಗೋಷ್ಠಿ ನಡೆಯಿತು. ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಪ್ರಾಸ್ತಾವಿಕ ಮಾತುಗಳನ್ನು ಹಾಗೂ ಜಾನಪದ ವಿ.ವಿ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪಗೌಡ ಆಶಯ ನುಡಿಗಳನ್ನಾಡಿದರು.</p>.<p>ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್, ರಂಗಕರ್ಮಿ ಸಿ. ಬಸವಲಿಂಗಯ್ಯ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡರು. ಸಂವಾದದಲ್ಲಿ 40ಕ್ಕೂ ಹೆಚ್ಚು ವಿದ್ವಾಂಸರು ಮತ್ತು ಸಾಹಿತಿಗಳು ಭಾಗವಹಿಸಿದ್ದರು.</p>.<p><strong>ಗಾಯನ ನೃತ್ಯದ ರಸದೌತಣ </strong></p><p>ಲೋಕೋತ್ಸವದಲ್ಲಿ ಮೂಲ ಹಾಗೂ ಆಧುನಿಕ ಜಾನಪದ ಗಾಯಕರಿಂದ ಜರುಗಿದ ಜಾನಪದ ಗೀತ ಗಾಯನೋತ್ಸವವು ಪ್ರೇಕ್ಷಕರಿಗೆ ರಸದೌತಣ ಬಡಿಸಿತು. ಡಾ. ಅಪ್ಪಗೆರೆ ತಿಮ್ಮರಾಜು ಡಾ. ವೇಮಗಲ್ ನಾರಾಯಣಸ್ವಾಮಿ ಸಿ.ಎಂ. ನರಸಿಂಹಮೂರ್ತಿ ರಾಜಪ್ಪ ಕೋಲಾರ ಚೈತ್ರ ಶಿವನಾಗ್ ಮತ್ತು ಸ್ಪಂದನ ಬಾಲು ಗಾಯನವು ಜನರನ್ನು ಮಂತ್ರಮುಗ್ಧರನ್ನಾಗಿಸಿತು. ಕುಣಿಸಿತು. ಸಂಜೆ ನಡೆದ ಬುಡಕಟ್ಟು ಸಿದ್ದಿಯರ ಡಮಾಮಿ ನೃತ್ಯ ಮತ್ತು ಸೋಲಿಗರ ನೃತ್ಯ ಪ್ರದರ್ಶನವು ಗಮನ ಸೆಳೆಯಿತು. ರಾತ್ರಿ 7.30ರ ಸುಮಾರಿಗೆ ಮಂಡ್ಯ ಕರ್ನಾಟಕ ಸಂಘ ಪ್ರಸ್ತುತಪಡಿಸಿದ ಮಕ್ಕಳ ಮೂಡಲಪಾಯ ಯಕ್ಷಗಾನ ‘ಕರ್ಣಾರ್ಜುನರ ಕಾಳಗ’ ಪ್ರಸಂಗದ ಪ್ರದರ್ಶನ ಗಮನ ಸೆಳೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ಅಮೂಲ್ಯವಾದ ಜಾನಪದ ಕಲೆಗಳನ್ನು ಉಳಿಸುವ ಕೆಲಸಗಳಾಗಬೇಕು. ಆ ನಿಟ್ಟಿನಲ್ಲಿ ಜಾನಪದ ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಲು ಸರ್ಕಾರ ಅಗತ್ಯ ಪ್ರೋತ್ಸಾಹ ನೀಡುತ್ತಿದೆ. ಇದನ್ನೇ ಮನಗಂಡು ಎಚ್.ಎಲ್. ನಾಗೇಗೌಡರು ಜಾನಪದ ಲೋಕ ಕಟ್ಟಿದ್ದಾರೆ. ಲೋಕದ ಬೆಳವಣಿಗೆ ಎಲ್ಲರ ಜವಾಬ್ದಾರಿ. ಇಲ್ಲಿಗೆ ಅಗತ್ಯವಿರುವ ಅನುದಾನ ಒದಗಿಸಲು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗರೆಡ್ಡಿ ಭರವಸೆ ನೀಡಿದರು.</p>.<p>ನಗರದ ಜಾನಪದ ಲೋಕದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಆಯೋಜಿಸಿರುವ ಎರಡು ದಿನಗಳ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ’ದ ಕಡೆಯ ದಿನವಾದ ಭಾನುವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಾನಪದ ವಿದ್ವಾಂಸರು ಹಾಗೂ ಕಲಾವಿದರಿಗೆ ‘ಜಾನಪದ ಲೋಕ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಪ್ರತಿ ವರ್ಷ ಬಜೆಟ್ ಮಂಡಿಸುವ ಮುನ್ನ ಮುಖ್ಯಮಂತ್ರಿ ಅವರು ಎಲ್ಲಾ ಸಚಿವರನ್ನು ಕರೆದು ಖರ್ಚು ವೆಚ್ಚಗಳ ಬಗ್ಗೆ ಅಗತ್ಯವಿರುವ ಅನುದಾನಗಳ ಬಗ್ಗೆ ಆಲಿಸುತ್ತಾರೆ. ಜಾನಪದ ಲೋಕದವರು ಈ ರೀತಿಯ ಕಾರ್ಯಕ್ರಮಗಳಿಗೆ ಅನುದಾನ ಬೇಕಾಗಿದೆ ಎಂದು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾನು ಗಮನ ಹರಿಸುವೆ’ ಎಂದರು.</p>.<p>‘ಜಾನಪದ ಎಂಬುದು ಗ್ರಾಮೀಣ ಕಲೆಯಾಗಿದೆ. ಕಾಡಲ್ಲಿ ವಾಸಿಸುವ ಬುಡಕಟ್ಟು ಜನರ ಕಲೆ, ಸೋಲಿಗರ ಕಲೆ ಸೇರಿದಂತೆ ಇತರೆ ಕಲೆಗಳನ್ನು ಉಳಿಸುವಂತಹ ಕೆಲಸಗಳಾಗಬೇಕಾಗಿದೆ. ಕಲೆಗಳ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕು. ಜಾನಪದ ಲೋಕವು ಇನ್ನಷ್ಟು ಬೆಳೆಯಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ. ಚಿ. ಬೋರಲಿಂಗಯ್ಯ, ಆಡಳಿತ ಮಂಡಳಿ ಸದಸ್ಯರಾದ ವೇಮಗಲ್ ನಾರಾಯಣಸ್ವಾಮಿ, ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಹಾಗೂ ಇತರರು ಇದ್ದರು.</p>.<p><strong>ಸಂವಾದ:</strong> ಲೋಕೋತ್ಸವ ಪ್ರಯುಕ್ತ ಬೆಳಿಗ್ಗೆ 10.30ಕ್ಕೆ ‘ಯುವಜನರಲ್ಲಿ ಜಾನಪದ ಗಾಯನ ಮತ್ತು ಕಲೆಗಳ ಸಂವರ್ಧನೆ’ ಎಂಬ ವಿಷಯ ಕುರಿತು ಚರ್ಚೆ-ಸಂವಾದ ಗೋಷ್ಠಿ ನಡೆಯಿತು. ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಪ್ರಾಸ್ತಾವಿಕ ಮಾತುಗಳನ್ನು ಹಾಗೂ ಜಾನಪದ ವಿ.ವಿ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪಗೌಡ ಆಶಯ ನುಡಿಗಳನ್ನಾಡಿದರು.</p>.<p>ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್, ರಂಗಕರ್ಮಿ ಸಿ. ಬಸವಲಿಂಗಯ್ಯ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡರು. ಸಂವಾದದಲ್ಲಿ 40ಕ್ಕೂ ಹೆಚ್ಚು ವಿದ್ವಾಂಸರು ಮತ್ತು ಸಾಹಿತಿಗಳು ಭಾಗವಹಿಸಿದ್ದರು.</p>.<p><strong>ಗಾಯನ ನೃತ್ಯದ ರಸದೌತಣ </strong></p><p>ಲೋಕೋತ್ಸವದಲ್ಲಿ ಮೂಲ ಹಾಗೂ ಆಧುನಿಕ ಜಾನಪದ ಗಾಯಕರಿಂದ ಜರುಗಿದ ಜಾನಪದ ಗೀತ ಗಾಯನೋತ್ಸವವು ಪ್ರೇಕ್ಷಕರಿಗೆ ರಸದೌತಣ ಬಡಿಸಿತು. ಡಾ. ಅಪ್ಪಗೆರೆ ತಿಮ್ಮರಾಜು ಡಾ. ವೇಮಗಲ್ ನಾರಾಯಣಸ್ವಾಮಿ ಸಿ.ಎಂ. ನರಸಿಂಹಮೂರ್ತಿ ರಾಜಪ್ಪ ಕೋಲಾರ ಚೈತ್ರ ಶಿವನಾಗ್ ಮತ್ತು ಸ್ಪಂದನ ಬಾಲು ಗಾಯನವು ಜನರನ್ನು ಮಂತ್ರಮುಗ್ಧರನ್ನಾಗಿಸಿತು. ಕುಣಿಸಿತು. ಸಂಜೆ ನಡೆದ ಬುಡಕಟ್ಟು ಸಿದ್ದಿಯರ ಡಮಾಮಿ ನೃತ್ಯ ಮತ್ತು ಸೋಲಿಗರ ನೃತ್ಯ ಪ್ರದರ್ಶನವು ಗಮನ ಸೆಳೆಯಿತು. ರಾತ್ರಿ 7.30ರ ಸುಮಾರಿಗೆ ಮಂಡ್ಯ ಕರ್ನಾಟಕ ಸಂಘ ಪ್ರಸ್ತುತಪಡಿಸಿದ ಮಕ್ಕಳ ಮೂಡಲಪಾಯ ಯಕ್ಷಗಾನ ‘ಕರ್ಣಾರ್ಜುನರ ಕಾಳಗ’ ಪ್ರಸಂಗದ ಪ್ರದರ್ಶನ ಗಮನ ಸೆಳೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>