ಪ್ರೊ.ಎಂ. ನಂಜುಂಡಸ್ವಾಮಿ ಅವರ ಅನುಯಾಯಿಯಾಗಿ ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ತಾಲ್ಲೂಕಿನ ರೈತರ ಕಣ್ಮಣಿಯಾಗಿದ್ದ ರಾಮು ಅವರ ನಿಧನ ತಾಲ್ಲೂಕಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ. ರೈತಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಅವರು ಅಕಾಲಿಕವಾಗಿ ಮರಣ ಹೊಂದಿರುವುದು ನಿಜಕ್ಕೂ ದುರಂತ ಎಂದು ಯೋಗೇಶ್ವರ್ ವಿಷಾದಿಸಿದರು.