ಮುತ್ತುರಾಯಸ್ವಾಮಿ ದೇವಾಲಯ ಪುರಾತನ ದೇವಾಲಯಗಳಲ್ಲಿ ಒಂದಾ ಗಿದೆ. ಪ್ರತಿದಿನ ನೂರಾರು ಭಕ್ತರು ದೇವಾಲಯಕ್ಕೆ ಬರುತ್ತಾರೆ. ದೇವರ ಕಾಣಿಕೆಯಾಗಿ ಸಾವಿರಾರು ರೂಪಾಯಿ ಬರುತ್ತಿದ್ದು ಅದನ್ನು ದೇವಸ್ಥಾನದ ಅಕೌಂಟ್ಗೆ ಹಾಕಿ ದೇವಾಲಯ ಅಭಿವೃದ್ಧಿಗೆ ಬಳಸಬೇಕಿದೆ. ಆದರೆ, ದೇವಸ್ಥಾನ ಸಮಿತಿ ಸದಸ್ಯರಾದ ಶ್ರೀನಿವಾಸ್, ಮಹೇಶ್, ಅನಿಲ್ ಅವರು ಬ್ಯಾಂಕ್ ಖಾತೆಗೆ ಜಮಾ ಮಾಡದೆ ವೈಯಕ್ತಿಕವಾಗಿ ಬಳಕೆ ಮಾಡಿಕೊಂಡು ದೇವಾಲಯದ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.