ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಮಕ್ಕಳ ಆರೋಗ್ಯ ಕಾಳಜಿಗೆ ಒತ್ತು ನೀಡಿ: ಇಕ್ಬಾಲ್ ಹುಸೇನ್

ಜಿಲ್ಲಾಸ್ಪತ್ರೆಯಲ್ಲಿ ಮಿಷನ್ ಇಂಧ್ರಧನುಷ್ ಅಭಿಯಾನಕ್ಕೆ ಶಾಸಕ ಚಾಲನೆ
Published : 7 ಆಗಸ್ಟ್ 2023, 13:41 IST
Last Updated : 7 ಆಗಸ್ಟ್ 2023, 13:41 IST
ಫಾಲೋ ಮಾಡಿ
Comments
‘ಸಿಬ್ಬಂದಿ ಕೊರತೆ ನೀಗಿಲು ಒತ್ತು’
‘ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದ್ದರೂ ಇರುವವರನ್ನು ಬಳಸಿಕೊಂಡು ರೋಗಿಗಳಿಗೆ ಉತ್ತಮ ಚಿಕಿತ್ಸೆ ಕೊಡಲಾಗುತ್ತಿದೆ. ಜಿಲ್ಲೆಯ ನಾಲ್ಕೂ ತಾಲ್ಲೂಕುಗಳ ರೋಗಿಗಳು ಇಲ್ಲಿಗೆ ಬರುವುದರಿಂದ ಹಿಂದಿಗಿಂತ ದಟ್ಟಣೆ ಹೆಚ್ಚಾಗಿದೆ. ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿ ಕುರಿತು ಸಂಬಂಧಪಟ್ಟ ನಮ್ಮ ಸಂಸದರು ಉಪ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ಗಮನಕ್ಕೆ ತಂದು ಕೊರತೆ ನೀಗಿಸಲಾಗುವುದು’ ಎಂದು ಇಕ್ಬಾಲ್ ಹುಸೇನ್ ಭರವಸೆ ನೀಡಿದರು. ‘ಮೂರ್ನಾಲ್ಕು ತಿಂಗಳೊಳಗೆ ಪರಿಹಾರ’ ‘ನಗರದಲ್ಲಿ ಕುಡಿಯುವ ನೀರು ರಸ್ತೆ ಅವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಮೂರ್ನಾಲ್ಕು ತಿಂಗಳೊಳಗೆ ಪರಿಹಾರ ಸಿಗಲಿದೆ. ನಿರಂತರ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ರಸ್ತೆಗಳನ್ನು ಅಗೆಯಲಾಗಿದ್ದು ಜನರಿಗೆ ತೊಂದರೆಯಾಗಿದೆ. ಕಾಮಗಾರಿ ಮುಗಿದ ಬಳಿಕ ನೀರು ಮತ್ತು ರಸ್ತೆ ಸಮಸ್ಯೆ ಬಗೆಹರಿಯಲಿದೆ’ ಎಂದು ಶಾಸಕರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ದ ರಾಜ್ಯಪಾಲರ ಅಧೀನ ಕಾರ್ಯದರ್ಶಿಗೆ ಅಧಿಕಾರಿಗಳು ಪತ್ರ ಬರೆದಿರುವ ಕುರಿತು ನನಗೆ ಗೊತ್ತಿಲ್ಲ. ಹಿರಿಯ ರಾಜಕಾರಣಿಯಾಗಿರುವ ಅವರಿಗೆ ಆ ರೀತಿ ಹಣ ಮಾಡುವ ಅಗತ್ಯವೂ ಇಲ್ಲ. ಪತ್ರವನ್ನು ನಿಜಕ್ಕೂ ಬರೆದಿದ್ದಾರೊ ಅಥವಾ ಬರೆಸಿದ್ದಾರೊ’ ಎಂದು ಅನುಮಾನ ವ್ಯಕ್ತಪಡಿಸಿದರು.
ರಾಮನಗರದ ಜಿಲ್ಲಾಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ಆಸ್ಪತ್ರೆಗೆ ಬಂದಿದ್ದ ರೋಗಿಗಳೊಂದಿಗೆ ಮಾತನಾಡಿದರು
ರಾಮನಗರದ ಜಿಲ್ಲಾಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ಆಸ್ಪತ್ರೆಗೆ ಬಂದಿದ್ದ ರೋಗಿಗಳೊಂದಿಗೆ ಮಾತನಾಡಿದರು
ಸಮೀಕ್ಷೆ ನಡೆಸಿ ಲಸಿಕೆಯಿಂದ ವಂಚಿತರಾದವರನ್ನು ಗುರುತಿಸಲಾಗಿದೆ. ಜಿಲ್ಲೆಯಾದ್ಯಂತ ಸುಮಾರು 515 ಕೇಂದ್ರಗಳಲ್ಲಿ ಮೂರು ಸುತ್ತಿನಲ್ಲಿ ಲಸಿಕೆ ಹಾಕಲಾಗುವುದು
– ಕೆ.ಪಿ. ಕಾಂತರಾಜ್ ಜಿಲ್ಲಾ ಆರೋಗ್ಯಾಧಿಕಾರಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT