ಲಾಕ್ಡೌನ್ ಆದೇಶದ ನಡುವೆಯೂ ಜಿಲ್ಲೆಯಲ್ಲಿ ವಾಹನಗಳ ಓಡಾಟ ಕಂಡುಬಂದಿತು. ಅದರಲ್ಲೂ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಿಗ್ನಲ್ ಕಾರ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಅಗತ್ಯ ವಸ್ತುಗಳಾದ ತರಕಾರಿ, ಹಣ್ಣು, ದಿನಸಿ ಪದಾರ್ಥಗಳು, ಆಸ್ಪತ್ರೆ, ಮೆಡಿಕಲ್ ಸ್ಟೋರ್, ಮಾಂಸದಂಗಡಿಗಳು ತೆರೆದಿದ್ದವು. ಬಾರ್, ಹೋಟೆಲ್ಗಳು ಮುಚ್ಚಿದ್ದವು. ರೇಷ್ಮೆಗೂಡು ಮಾರುಕಟ್ಟೆ, ಎಪಿಎಂಸಿಗೆ ಸಹ ರಜೆ ಘೋಷಣೆಯಾಗಿತ್ತು.