ಶಾಸಕಿ ಅನಿತಾ ಅವರು ಈಚೆಗೆ ಕ್ಷೇತ್ರಕ್ಕೆ ಅಪರೂಪವಾಗಿದ್ದಾರೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭ ಅವರು ಮಂಡ್ಯದಲ್ಲಿ ಪುತ್ರನ ಪರ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಂತರದಲ್ಲಿಯೂ ಕ್ಷೇತ್ರಕ್ಕೆ ಬಂದಿಲ್ಲ. ಸಭೆ–ಸಮಾರಂಭಗಳಲ್ಲಿ ಪಾಲ್ಗೊಂಡಿಲ್ಲ. ಇದು ಜನರ ಸಿಟ್ಟಿಗೆ ಕಾರಣವಾಗಿದೆ. ಮತ್ತೊಂದೆಡೆ ಚನ್ನಪಟ್ಟಣದ ಶಾಸಕ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೂಡ ಕ್ಷೇತ್ರಕ್ಕೆ ಅಪರೂಪವಾಗಿದ್ದಾರೆ. ಬರ, ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಣೆ ಸಂಬಂಧ ಜಿಲ್ಲೆಯಲ್ಲಿ ಈವರೆಗೆ ಒಂದೇ ಒಂದು ಸಭೆ ನಡೆಸಿಲ್ಲ. ಇದು ಸಾರ್ವಜನಿಕರ ಅಸಮಾಧಾನಕ್ಕೂ ಕಾರಣವಾಗುತ್ತಿದೆ.