ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಪೌರ ಕಾರ್ಮಿಕರೊಂದಿಗೆ ಶಾಸಕ ಬಾಲಕೃಷ್ಣ ನೃತ್ಯ

Published 13 ಅಕ್ಟೋಬರ್ 2023, 8:33 IST
Last Updated 13 ಅಕ್ಟೋಬರ್ 2023, 8:33 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನಲ್ಲಿ ಬಿಡದಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ಶುಕ್ರವಾರ ನಡೆದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ ಅವರು ಪೌರ ಕಾರ್ಮಿಕರೊಂದಿಗೆ ನೃತ್ಯ ಮಾಡಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಬಿಳಿ ಪಂಚೆ ಮತ್ತು ಶರ್ಟ್‌ ಧರಿಸಿ ಮಿಂಚುತ್ತಿದ್ದ ಅವರು, ತಲೆಗೆ ರುಮಾಲು ಸುತ್ತಿಕೊಂಡು ಕೂಲಿಂಗ್ ಗ್ಲಾಸ್ ಧರಿಸಿ ರಾಜಕುಮಾರ್ ಅಭಿನಯದ ‘ಸತ್ಯ ಹರಿಶ್ಚಂದ್ರ’ ಚಲನಚಿತ್ರದ ‘ಕುಲದಲ್ಲಿ ಕೀಳ್ಯಾವುದೊ ಹುಚ್ಚಪ್ಪ’ ಹಾಡಿಗೆ ಹೆಜ್ಜೆ ಹಾಕಿದರು. ಅವರೊಂದಿಗೆ ಕೆಲ ಮಹಿಳಾ ಅಧಿಕಾರಿಗಳು ಸೇರಿದಂತೆ ಪೌರ ಕಾರ್ಮಿಕರು ಸಹ ನೃತ್ಯ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT