‘ನೇಕಾರ, ದರ್ಜಿ, ಕುಂಬಾರ ಸೇರಿ ಹಲವು ಸಮುದಾಯಕ್ಕೆ ಘೋಷಣೆ ಮಾಡಿದ ₹ 5 ಸಾವಿರ ಪರಿಹಾರ ಯಾವುದಕ್ಕೂ ಸಾಲದು, ಟ್ಯಾಕ್ಸಿ, ಕ್ಯಾಬ್ ಚಾಲಕರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಕೆಲವು ಚಾಲಕರು ಕ್ಯಾಬ್ ಮಾಲೀಕರ ಬಳಿ ಕೂಲಿಗಾಗಿ ಕೆಲಸ ಮಾಡುತ್ತಿದ್ದಾರೆ ಅಂತಹವರು ವಂಚಿತರಾಗುತ್ತಿದ್ದಾರೆ. ಸರ್ಕಾರ, ಸಾರಿಗೆ ಇಲಾಖೆಯಲ್ಲಿ ದಾಖಲಾಗಿರುವ ಮಾಹಿತಿಯನ್ನಾಧರಿಸಿ ಪರಿಹಾರಧನ ಕೊಡುತ್ತಾರೆ. ಇದರಿಂದ ಸಾಕಷ್ಟು ಮಂದಿ ಅರ್ಹರು ಸೌಲಭ್ಯ ಪಡೆಯುವಲ್ಲಿ ವಂಚಿತರಾಗುತ್ತಾರೆ’ ಎಂದರು.