<p>ರಾಮನಗರ: ತಾಲ್ಲೂಕಿನ ಕಸಬಾ ಹೋಬಳಿಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಬುಧವಾರ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಪಂಚಾಯಿತಿ ಮಟ್ಟದಲ್ಲಿ 15ನೇ ಹಣಕಾಸು ಯೋಜನೆಯಡಿ, ಕುಡಿಯುವ ನೀರು ಹಾಗೂ ಚರಂಡಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವೆ’ ಎಂದರು.</p>.<p>‘ಕುಡಿಯುವ ನೀರಿನ ಕೊರತೆ ಇರುವ ಕಡೆಗೆ ಟ್ಯಾಂಕರ್ ನೀರು ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ಕೆಲವೆಡೆ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಗೆ ಕಾದಿದ್ದು, ಕೂಡಲೇ ದುರಸ್ತಿ ಮುಗಿಸಿ ನೀರು ಪೂರೈಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಮಂಚನಬೆಲೆ ಎಡ ಹಾಗೂ ಬಲದಂಡೆ ನಾಲೆಗಳ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವೇ ನಾಲೆಯಲ್ಲಿ ನೀರು ಹರಿಯಲಿದೆ. ನಾಲೆ ಸಾಗಿರುವ ಮಾರ್ಗವನ್ನು ಕೆಲವರು ಒತ್ತುವರಿ ಮಾಡಿಕೊಂಡು ಮುಚ್ಚಿರುವುದು ಕಂಡುಬಂದಿದೆ. ಅಂತಹ ಜಾಗವನ್ನು ತೆರವುಗೊಳಿಸಿ ನಾಲೆ ಸ್ವಚ್ಛಗೊಳಿಸಲಾಗುವುದು. ಮುಖ್ಯಮಂತ್ರಿಗಳ ₹20 ಕೋಟಿ ವಿಶೇಷ ಅನುದಾನದಡಿ ಪ್ರತಿ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಹಲವೆಡೆ ಕಾಮಗಾರಿ ಶುರುವಾಗಿದೆ’ ಎಂದು ತಿಳಿಸಿದರು.</p>.<p>ಬಮೂಲ್ ನಿರ್ದೇಶಕ ಪಿ. ನಾಗರಾಜು, ಹರಿಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಮ್ಮ, ಉಪಾಧ್ಯಕ್ಷ ವೀರಭದ್ರಸ್ವಾಮಿ, ಪಿಡಿಒ ದಯಾನಂದಸಾಗರ್, ಮುಖಂಡರಾದ ದೊಡ್ಡವೀರಯ್ಯ, ಮಂಜುಳಾ ಮರಿದೇವರು, ಪುಟ್ಟಣ್ಣ, ರವಿ, ಸತೀಶ್, ಮಂಚೇಗೌಡ, ವೆಂಕಟೇಶ್, ಸಿದ್ದಪ್ಪ, ರಂಜಿತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ತಾಲ್ಲೂಕಿನ ಕಸಬಾ ಹೋಬಳಿಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಬುಧವಾರ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಪಂಚಾಯಿತಿ ಮಟ್ಟದಲ್ಲಿ 15ನೇ ಹಣಕಾಸು ಯೋಜನೆಯಡಿ, ಕುಡಿಯುವ ನೀರು ಹಾಗೂ ಚರಂಡಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವೆ’ ಎಂದರು.</p>.<p>‘ಕುಡಿಯುವ ನೀರಿನ ಕೊರತೆ ಇರುವ ಕಡೆಗೆ ಟ್ಯಾಂಕರ್ ನೀರು ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ಕೆಲವೆಡೆ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಗೆ ಕಾದಿದ್ದು, ಕೂಡಲೇ ದುರಸ್ತಿ ಮುಗಿಸಿ ನೀರು ಪೂರೈಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಮಂಚನಬೆಲೆ ಎಡ ಹಾಗೂ ಬಲದಂಡೆ ನಾಲೆಗಳ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವೇ ನಾಲೆಯಲ್ಲಿ ನೀರು ಹರಿಯಲಿದೆ. ನಾಲೆ ಸಾಗಿರುವ ಮಾರ್ಗವನ್ನು ಕೆಲವರು ಒತ್ತುವರಿ ಮಾಡಿಕೊಂಡು ಮುಚ್ಚಿರುವುದು ಕಂಡುಬಂದಿದೆ. ಅಂತಹ ಜಾಗವನ್ನು ತೆರವುಗೊಳಿಸಿ ನಾಲೆ ಸ್ವಚ್ಛಗೊಳಿಸಲಾಗುವುದು. ಮುಖ್ಯಮಂತ್ರಿಗಳ ₹20 ಕೋಟಿ ವಿಶೇಷ ಅನುದಾನದಡಿ ಪ್ರತಿ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಹಲವೆಡೆ ಕಾಮಗಾರಿ ಶುರುವಾಗಿದೆ’ ಎಂದು ತಿಳಿಸಿದರು.</p>.<p>ಬಮೂಲ್ ನಿರ್ದೇಶಕ ಪಿ. ನಾಗರಾಜು, ಹರಿಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಮ್ಮ, ಉಪಾಧ್ಯಕ್ಷ ವೀರಭದ್ರಸ್ವಾಮಿ, ಪಿಡಿಒ ದಯಾನಂದಸಾಗರ್, ಮುಖಂಡರಾದ ದೊಡ್ಡವೀರಯ್ಯ, ಮಂಜುಳಾ ಮರಿದೇವರು, ಪುಟ್ಟಣ್ಣ, ರವಿ, ಸತೀಶ್, ಮಂಚೇಗೌಡ, ವೆಂಕಟೇಶ್, ಸಿದ್ದಪ್ಪ, ರಂಜಿತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>