<p>ಚನ್ನಪಟ್ಟಣ (ರಾಮನಗರ): ‘ಚನ್ನಪಟ್ಟಣದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಡಿ.ಕೆ.ಸಹೋದರರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳಿದ್ದರು. ಆದರೆ, ಆ ಅಚ್ಚರಿ ಅಭ್ಯರ್ಥಿ ಇದೀಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ’ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಹೇಳಿದರು.</p>.<p>ಉಪ ಚುನಾವಣೆ ಕುರಿತು ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಟ ದರ್ಶನ್ ಹೆಸರನ್ನು ಪ್ರಸ್ತಾಪಿಸದೆ ಪ್ರತಿಕ್ರಿಯಿಸಿದರು.</p>.<p>‘ಚನ್ನಪಟ್ಟಣಕ್ಕೆ ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಹಾಕುತ್ತೇವೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರೇ ಹೇಳಿದ್ದರು. ಕಾಂಗ್ರೆಸ್ ಪರವಾಗಿ ಚಿತ್ರನಟರೊಬ್ಬರು ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ನನಗೆ ಬಂದ ಮಾಹಿತಿ ಪ್ರಕಾರ, ಅವರನ್ನೇ ಕರೆದುಕೊಂಡು ಬಂದು ನಿಲ್ಲಿಸಲು ಸಹೋದರರು ಯೋಜನೆ ಹಾಕಿದ್ದರು. ಈಗ ಬೇರೆಯವರನ್ನು ಕರೆ ತರುತ್ತಾರಾ ನೋಡಬೇಕು’ ಎಂದರು.</p>.<p>‘ಆ ನಟನಿಗೂ ರಾಜಕೀಯಕ್ಕೆ ಬರಬೇಕೆಂಬ ಮಹತ್ವಾಕಾಂಕ್ಷೆ ಇತ್ತು ಎನಿಸುತ್ತದೆ. ಆದರೆ, ಅನಾಹುತ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಈ ಕುರಿತು ನಾನು ಸಹ ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಅವರ ಕುರಿತು ಇಷ್ಟು ಮಾಹಿತಿ ನೀಡಿದ್ದೇನೆ. ಯಾರೆಂದು ನೀವೇ ಊಹಿಸಿಕೊಳ್ಳಿ’ ಎಂದು ಮುಂದಿನ ಪ್ರಶ್ನೆಗಳಿಗೆ ಪ್ರತಿಕ್ರಿಯಿಸದೆ ಜಾರಿಕೊಂಡರು.</p>.<p>‘ನಾನು ಉಪ ಚುನಾವಣೆ ಆಕಾಂಕ್ಷಿಯಾದರೂ ಅಭ್ಯರ್ಥಿ ಕುರಿತು ಬಿಜೆಪಿ ಮತ್ತು ಜೆಡಿಎಸ್ ವರಿಷ್ಠರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ (ರಾಮನಗರ): ‘ಚನ್ನಪಟ್ಟಣದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಡಿ.ಕೆ.ಸಹೋದರರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳಿದ್ದರು. ಆದರೆ, ಆ ಅಚ್ಚರಿ ಅಭ್ಯರ್ಥಿ ಇದೀಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ’ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಹೇಳಿದರು.</p>.<p>ಉಪ ಚುನಾವಣೆ ಕುರಿತು ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಟ ದರ್ಶನ್ ಹೆಸರನ್ನು ಪ್ರಸ್ತಾಪಿಸದೆ ಪ್ರತಿಕ್ರಿಯಿಸಿದರು.</p>.<p>‘ಚನ್ನಪಟ್ಟಣಕ್ಕೆ ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಹಾಕುತ್ತೇವೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರೇ ಹೇಳಿದ್ದರು. ಕಾಂಗ್ರೆಸ್ ಪರವಾಗಿ ಚಿತ್ರನಟರೊಬ್ಬರು ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ನನಗೆ ಬಂದ ಮಾಹಿತಿ ಪ್ರಕಾರ, ಅವರನ್ನೇ ಕರೆದುಕೊಂಡು ಬಂದು ನಿಲ್ಲಿಸಲು ಸಹೋದರರು ಯೋಜನೆ ಹಾಕಿದ್ದರು. ಈಗ ಬೇರೆಯವರನ್ನು ಕರೆ ತರುತ್ತಾರಾ ನೋಡಬೇಕು’ ಎಂದರು.</p>.<p>‘ಆ ನಟನಿಗೂ ರಾಜಕೀಯಕ್ಕೆ ಬರಬೇಕೆಂಬ ಮಹತ್ವಾಕಾಂಕ್ಷೆ ಇತ್ತು ಎನಿಸುತ್ತದೆ. ಆದರೆ, ಅನಾಹುತ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಈ ಕುರಿತು ನಾನು ಸಹ ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಅವರ ಕುರಿತು ಇಷ್ಟು ಮಾಹಿತಿ ನೀಡಿದ್ದೇನೆ. ಯಾರೆಂದು ನೀವೇ ಊಹಿಸಿಕೊಳ್ಳಿ’ ಎಂದು ಮುಂದಿನ ಪ್ರಶ್ನೆಗಳಿಗೆ ಪ್ರತಿಕ್ರಿಯಿಸದೆ ಜಾರಿಕೊಂಡರು.</p>.<p>‘ನಾನು ಉಪ ಚುನಾವಣೆ ಆಕಾಂಕ್ಷಿಯಾದರೂ ಅಭ್ಯರ್ಥಿ ಕುರಿತು ಬಿಜೆಪಿ ಮತ್ತು ಜೆಡಿಎಸ್ ವರಿಷ್ಠರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>