<p><strong>ರಾಮನಗರ: </strong>ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ದೂರುದಾರ ದಿನೇಶ್ ಕಲ್ಲಹಳ್ಳಿ ಅಭಿನಂದಿಸಿದ್ದಾರೆ. ಇನ್ನಷ್ಟು ಪ್ರಭಾವಿ ನಾಯಕರು, ಸಚಿವರ ಅಕ್ರಮಗಳ ದಾಖಲೆಗಳು ತಮ್ಮ ಬಳಿ ಇದ್ದು, ಸಕಾಲದಲ್ಲಿ ಅದನ್ನು ಬಹಿರಂಗಪಡಿಸುವುದಾಗಿ ಅವರು ತಿಳಿಸಿದ್ದಾರೆ. ಭದ್ರತೆ: ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ತಮಗೆ ಭದ್ರತೆ ನೀಡುವಂತೆ ದಿನೇಶ್ ರಾಮನಗರ ಎಸ್ಪಿಗೆ ವಾಟ್ಸ್ ಆ್ಯಪ್ ಮೂಲಕ ದೂರು ನೀಡಿದ್ದರು. ದೂರು ಆಧರಿಸಿ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಇರುವ ಅವರ ನಿವಾಸಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>