ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊಟದ ವಿಚಾರಕ್ಕೆ ಗಲಾಟೆ: ತಾಯಿ– ಮಗ ಆತ್ಮಹತ್ಯೆ

Last Updated 15 ಜನವರಿ 2023, 14:21 IST
ಅಕ್ಷರ ಗಾತ್ರ

ರಾಮನಗರ: ಶುಕ್ರವಾರ ರಾತ್ರಿ ಇಲ್ಲಿನ ಕುಮಾರಸ್ವಾಮಿ ಬಡಾವಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ತಾಯಿ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಜಯಲಕ್ಷ್ಮಿ (45) ಹಾಗೂ ಅವರ ಪುತ್ರ ಹರ್ಷ (24) ಮೃತರು. ಇಬ್ಬರೂ ಬೇಕರಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದರು. ರಾತ್ರಿ ಊಟ ಹಾಕಿಕೊಡುವ ವಿಚಾರಕ್ಕೆ ತಾಯಿ ಹಾಗೂ ಮಗನ ನಡುವೆ ಗಲಾಟೆಯಾಗಿದೆ. ಇದರಿಂದ ಮನನೊಂದು ತಾಯಿ ಮನೆಯ ಸಂಪಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಮಗ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಐಜೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT