ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಸಂಸದ ಸುರೇಶ್ 

Last Updated 19 ಜುಲೈ 2020, 9:07 IST
ಅಕ್ಷರ ಗಾತ್ರ

ರಾಮನಗರ: ಭಾನುವಾರ ಕನಕಪುರದ ದೇಗುಲ ಮಠದ ಪಕ್ಕದಲ್ಲಿರುವ ರುದ್ರಭೂಮಿಯಲ್ಲಿ ನಡೆದ ಕೋವಿಡ್ ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಸಂಸದ ಡಿ.ಕೆ. ಸುರೇಶ್ ಪಾಲ್ಗೊಂಡರು.

ಕನಕಪುರದ ಆಭರಣ ಮಳಿಗೆಯೊಂದರ ಮಾಲೀಕರೊಬ್ಬರು ಮೂರು ದಿನದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ನಂತರದಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು. ಅವರ ಅಂತ್ಯಕ್ರಿಯೆಯಲ್ಲಿ ಕುಟುಂಬದವರೊಂದಿಗೆ ಸಂಸದ ಡಿ.ಕೆ. ಸುರೇಶ್ ಹಾಗೂ‌ ವಿಧಾನ ಪರಿಷತ್ ಸದಸ್ಯ ರವಿ ಪಿಪಿಇ ಕಿಟ್ ಧರಿಸಿ ಭಾಗಿಯಾದರು.

ಆರೋಗ್ಯ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಿದರು.

ಸುರೇಶ್ ಕಳೆದ ವಾರ ಪಿಪಿಇ ಕಿಟ್ ಧರಿಸಿ ರಾಮನಗರ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಅಹವಾಲು ಆಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT