ಕನಕಪುರದ ಆಭರಣ ಮಳಿಗೆಯೊಂದರ ಮಾಲೀಕರೊಬ್ಬರು ಮೂರು ದಿನದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ನಂತರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಅವರ ಅಂತ್ಯಕ್ರಿಯೆಯಲ್ಲಿ ಕುಟುಂಬದವರೊಂದಿಗೆ ಸಂಸದ ಡಿ.ಕೆ. ಸುರೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ರವಿ ಪಿಪಿಇ ಕಿಟ್ ಧರಿಸಿ ಭಾಗಿಯಾದರು. ಆರೋಗ್ಯ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಿದರು.