<p><strong>ಕನಕಪುರ: </strong>ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಜನರು ಪಾಲ್ಗೊಂಡರೆ ಅವರಿಗೂ ಸೋಂಕುತಗುಲುತ್ತದೆಂದು ಭಯಪಡಬೇಕಿಲ್ಲ ಎಂಬುದನ್ನು ಸಾರ್ವಜನಿಕವಾಗಿ ತಿಳಿಸಲು ಸಂಸದ ಡಿ.ಕೆ. ಸುರೇಶ್ ಅವರು ಸೋಂಕಿನಿಂದ ಮೃತಪಟ್ಟಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.</p>.<p>ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಮುಳ್ಳಹಳ್ಳಿ ಗ್ರಾಮದ ಲೋಕೇಶ್ (45) ಎಂಬುವರು ಸೋಂಕಿಗೆ ತುತ್ತಾಗಿ ಭಾನುವಾರ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ ಮುಳ್ಳಹಳ್ಳಿಯಲ್ಲಿ ಭಾನುವಾರ ನಡೆಯಿತು. ಈ ವೇಳೆ ಸುರೇಶ್ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವುದರ ಜತೆಗೆ ಅಂತ್ಯಸಂಸ್ಕಾರ ಮುಗಿಯುವವರೆಗೂ ಅಲ್ಲಿಯೇ ಇದ್ದು ಎಲ್ಲರಿಗೂ ಧೈರ್ಯ ತುಂಬಿದರು.</p>.<p>ಕೋವಿಡ್ 2ನೇ ಅಲೆಗೆ ಹೆದರಿರುವ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಹೊರಬಾರದೆ ಮನೆ ಸೇರಿದ್ದಾರೆ. ಕೆಲವರು ದೂರವಾಣಿ ಕರೆ ಸ್ವೀಕರಿಸದೆ ಜನರಿಂದ ಅಂತರ ಕಾಯ್ದುಕೊಂಡಿದ್ದಾರೆ.</p>.<p>ಸಂಸದ ಸುರೇಶ್ ಅವರು ತಮ್ಮ ಕ್ಷೇತ್ರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವುದರ ಜತೆಗೆ ಕೋವಿಡ್ನಿಂದ ಸತ್ತವರ ಸಂಸ್ಕಾರದಲ್ಲಿ ಪಾಲ್ಗೊಳ್ಳುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಜನರು ಪಾಲ್ಗೊಂಡರೆ ಅವರಿಗೂ ಸೋಂಕುತಗುಲುತ್ತದೆಂದು ಭಯಪಡಬೇಕಿಲ್ಲ ಎಂಬುದನ್ನು ಸಾರ್ವಜನಿಕವಾಗಿ ತಿಳಿಸಲು ಸಂಸದ ಡಿ.ಕೆ. ಸುರೇಶ್ ಅವರು ಸೋಂಕಿನಿಂದ ಮೃತಪಟ್ಟಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.</p>.<p>ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಮುಳ್ಳಹಳ್ಳಿ ಗ್ರಾಮದ ಲೋಕೇಶ್ (45) ಎಂಬುವರು ಸೋಂಕಿಗೆ ತುತ್ತಾಗಿ ಭಾನುವಾರ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ ಮುಳ್ಳಹಳ್ಳಿಯಲ್ಲಿ ಭಾನುವಾರ ನಡೆಯಿತು. ಈ ವೇಳೆ ಸುರೇಶ್ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವುದರ ಜತೆಗೆ ಅಂತ್ಯಸಂಸ್ಕಾರ ಮುಗಿಯುವವರೆಗೂ ಅಲ್ಲಿಯೇ ಇದ್ದು ಎಲ್ಲರಿಗೂ ಧೈರ್ಯ ತುಂಬಿದರು.</p>.<p>ಕೋವಿಡ್ 2ನೇ ಅಲೆಗೆ ಹೆದರಿರುವ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಹೊರಬಾರದೆ ಮನೆ ಸೇರಿದ್ದಾರೆ. ಕೆಲವರು ದೂರವಾಣಿ ಕರೆ ಸ್ವೀಕರಿಸದೆ ಜನರಿಂದ ಅಂತರ ಕಾಯ್ದುಕೊಂಡಿದ್ದಾರೆ.</p>.<p>ಸಂಸದ ಸುರೇಶ್ ಅವರು ತಮ್ಮ ಕ್ಷೇತ್ರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವುದರ ಜತೆಗೆ ಕೋವಿಡ್ನಿಂದ ಸತ್ತವರ ಸಂಸ್ಕಾರದಲ್ಲಿ ಪಾಲ್ಗೊಳ್ಳುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>