ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ ಸುರೇಶ್‌

Last Updated 4 ಮೇ 2021, 4:46 IST
ಅಕ್ಷರ ಗಾತ್ರ

ಕನಕಪುರ: ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಜನರು ಪಾಲ್ಗೊಂಡರೆ ಅವರಿಗೂ ಸೋಂಕುತಗುಲುತ್ತದೆಂದು ಭಯಪಡಬೇಕಿಲ್ಲ ಎಂಬುದನ್ನು ಸಾರ್ವಜನಿಕವಾಗಿ ತಿಳಿಸಲು ಸಂಸದ ಡಿ.ಕೆ. ಸುರೇಶ್‌ ಅವರು ಸೋಂಕಿನಿಂದ ಮೃತಪಟ್ಟಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಮುಳ್ಳಹಳ್ಳಿ ಗ್ರಾಮದ ಲೋಕೇಶ್‌ (45) ಎಂಬುವರು ಸೋಂಕಿಗೆ ತುತ್ತಾಗಿ ಭಾನುವಾರ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ ಮುಳ್ಳಹಳ್ಳಿಯಲ್ಲಿ ಭಾನುವಾರ ನಡೆಯಿತು. ಈ ವೇಳೆ ಸುರೇಶ್‌ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವುದರ ಜತೆಗೆ ಅಂತ್ಯಸಂಸ್ಕಾರ ಮುಗಿಯುವವರೆಗೂ ಅಲ್ಲಿಯೇ ಇದ್ದು ಎಲ್ಲರಿಗೂ ಧೈರ್ಯ ತುಂಬಿದರು.

ಕೋವಿಡ್‌ 2ನೇ ಅಲೆಗೆ ಹೆದರಿರುವ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಹೊರಬಾರದೆ ಮನೆ ಸೇರಿದ್ದಾರೆ. ಕೆಲವರು ದೂರವಾಣಿ ಕರೆ ಸ್ವೀಕರಿಸದೆ ಜನರಿಂದ ಅಂತರ‍ ಕಾಯ್ದುಕೊಂಡಿದ್ದಾರೆ.

ಸಂಸದ ಸುರೇಶ್‌ ಅವರು ತಮ್ಮ ಕ್ಷೇತ್ರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವುದರ ಜತೆಗೆ ಕೋವಿಡ್‌ನಿಂದ ಸತ್ತವರ ಸಂಸ್ಕಾರದಲ್ಲಿ ಪಾಲ್ಗೊಳ್ಳುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT