ಬೆಳಿಗ್ಗೆ ಹಳ್ಳದ ಬಳಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವವನ್ನು ನೋಡಿದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಬೀರಯ್ಯ ಎಂಬುದು ಗೊತ್ತಾಯಿತು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿ, ಕೊಲೆಯ ಜಾಡು ಹಿಡಿದು ತನಿಖೆ ನಡೆಸಿದಾಗ ತಮ್ಮನೇ ಕೊಲೆಗಾರ ಎಂಬುದು ಗೊತ್ತಾಯಿತು ಎಂದು ಪೊಲೀಸರು ತಿಳಿಸಿದರು.