ಈಚೆಗೆ ಕನಕಪುರ ತಾಲ್ಲೂಕಿನ ಹಳ್ಳಿಮಾರನಹಳ್ಳಿ ಜೆಡಿಎಸ್ ಮುಖಂಡ ನಾಗರಾಜು ಕೊಲೆಯಾಗಿತ್ತು. ಹತ್ಯೆಗೀಡಾದ ವ್ಯಕ್ತಿ ಜೊತೆ ವೀರಭದ್ರಾಚಾರಿ ಹಣಕಾಸು ವ್ಯವಹಾರ ನಡೆಸಿದ್ದು, ವೈಷಮ್ಯದಿಂದ ಹತ್ಯೆ ಮಾಡಿರಬಹುದು ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಮೂರು ದಿನದ ಹಿಂದೆ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯಲಾಗಿತ್ತು. ಆ ಸಂದರ್ಭ ಆರೋಪಿಯು ಠಾಣೆಯಲ್ಲೇ ಫಿನಾಯಿಲ್ ಕುಡಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದರು.