<p><strong>ರಾಮನಗರ</strong>: ತಾಲ್ಲೂಕಿನ ವಡ್ಡರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎಚ್. ನಾಗರಾಜು ಗುರುವಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಟಿ. ವೆಂಕಟೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಂಘದ ಆವರಣದಲ್ಲಿ ಚುನಾವಣೆ ನಡೆಯಿತು. ನಾಗರಾಜು ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾದರು. ಅವರನ್ನು ಆಡಳಿತ ಮಂಡಳಿ ನಿರ್ದೇಶಕರು, ಗ್ರಾಮಸ್ಥರು, ಮುಖಂಡರು ಅಭಿನಂದಿಸಿದರು. ಚುನಾವಣಾಧಿಕಾರಿಯಾಗಿ ಕೆ.ವಿ. ಉಮೇಶ್ ಕಾರ್ಯ ನಿರ್ವಹಿಸಿದರು.</p>.<p>ಅಧ್ಯಕ್ಷ ನಾಗರಾಜು ಮಾತನಾಡಿ, ‘ಸ್ಥಳೀಯ ರೈತರ ಜೀವನ ಮಟ್ಟ ಮತ್ತು ಅವರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಂಜೀವಿನಿಯಾಗಿದೆ. ರೈತರು ಉತ್ತಮ ತಳಿಯ ಹಸುಗಳನ್ನು ಸಾಕುವುದರ ಜೊತೆಗೆ ಹೈನುಗಾರಿಕೆಯಲ್ಲಿ ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ಹೆಚ್ಚಿನ ಲಾಭ ಪಡೆಯಬಹುದು’ ಎಂದು ಸಲಹೆ ನೀಡಿದರು.</p>.<p>ಸಂಘದ ಉಪಾಧ್ಯಕ್ಷೆ ಚನ್ನಮ್ಮ ಮಾತನಾಡಿ, ‘ಸಂಘದಲ್ಲಿ ಪ್ರತಿದಿನ 2,200 ರಿಂದ 2,300 ಲೀಟರ್ ಹಾಲು ಸಂಗ್ರಹ ಆಗುತ್ತಿದೆ. 5 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ ಕೇಂದ್ರಹೊಂದಿದೆ. ಉತ್ಪಾದಕರಿಗೆ ಕಾಲಕಾಲಕ್ಕೇ ಹಣ ಬಟಾವಡೆ ಮಾಡಲಾಗುತ್ತಿದ್ದು ಜನಸ್ನೇಹಿಯಾಗಿ ಸಂಘ ಮುನ್ನಡೆಯುತ್ತಿದೆ’ ಎಂದುತಿಳಿಸಿದರು.</p>.<p>ಸಂಘದ ಮುಖ್ಯ ಕಾರ್ಯ ನಿರ್ವಾಹಕ ಎನ್. ಪ್ರದೀಪ್, ಸದಸ್ಯರಾದ ಟಿ. ವೆಂಕಟೇಶ್, ಎನ್. ಈಶ್ವರ, ಪಿ. ಜಗದೀಶ್, ಕಪನಯ್ಯ, ಶಾಂತಮ್ಮ, ವೆಂಕಟವರದಯ್ಯ, ನಾಗಮಾದಯ್ಯ, ನಾರಾಯಣ, ತಾಯಿಮುದ್ದಮ್ಮ, ಮಹದೇವಮ್ಮ, ತಿಮ್ಮಯ್ಯ ಹಾಲು ಪರೀಕ್ಷಕ ಸಿದ್ದರಾಮಯ್ಯ, ಶುಚಿಗಾರ ಜೆ. ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ತಾಲ್ಲೂಕಿನ ವಡ್ಡರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎಚ್. ನಾಗರಾಜು ಗುರುವಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಟಿ. ವೆಂಕಟೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಂಘದ ಆವರಣದಲ್ಲಿ ಚುನಾವಣೆ ನಡೆಯಿತು. ನಾಗರಾಜು ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾದರು. ಅವರನ್ನು ಆಡಳಿತ ಮಂಡಳಿ ನಿರ್ದೇಶಕರು, ಗ್ರಾಮಸ್ಥರು, ಮುಖಂಡರು ಅಭಿನಂದಿಸಿದರು. ಚುನಾವಣಾಧಿಕಾರಿಯಾಗಿ ಕೆ.ವಿ. ಉಮೇಶ್ ಕಾರ್ಯ ನಿರ್ವಹಿಸಿದರು.</p>.<p>ಅಧ್ಯಕ್ಷ ನಾಗರಾಜು ಮಾತನಾಡಿ, ‘ಸ್ಥಳೀಯ ರೈತರ ಜೀವನ ಮಟ್ಟ ಮತ್ತು ಅವರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಂಜೀವಿನಿಯಾಗಿದೆ. ರೈತರು ಉತ್ತಮ ತಳಿಯ ಹಸುಗಳನ್ನು ಸಾಕುವುದರ ಜೊತೆಗೆ ಹೈನುಗಾರಿಕೆಯಲ್ಲಿ ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ಹೆಚ್ಚಿನ ಲಾಭ ಪಡೆಯಬಹುದು’ ಎಂದು ಸಲಹೆ ನೀಡಿದರು.</p>.<p>ಸಂಘದ ಉಪಾಧ್ಯಕ್ಷೆ ಚನ್ನಮ್ಮ ಮಾತನಾಡಿ, ‘ಸಂಘದಲ್ಲಿ ಪ್ರತಿದಿನ 2,200 ರಿಂದ 2,300 ಲೀಟರ್ ಹಾಲು ಸಂಗ್ರಹ ಆಗುತ್ತಿದೆ. 5 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ ಕೇಂದ್ರಹೊಂದಿದೆ. ಉತ್ಪಾದಕರಿಗೆ ಕಾಲಕಾಲಕ್ಕೇ ಹಣ ಬಟಾವಡೆ ಮಾಡಲಾಗುತ್ತಿದ್ದು ಜನಸ್ನೇಹಿಯಾಗಿ ಸಂಘ ಮುನ್ನಡೆಯುತ್ತಿದೆ’ ಎಂದುತಿಳಿಸಿದರು.</p>.<p>ಸಂಘದ ಮುಖ್ಯ ಕಾರ್ಯ ನಿರ್ವಾಹಕ ಎನ್. ಪ್ರದೀಪ್, ಸದಸ್ಯರಾದ ಟಿ. ವೆಂಕಟೇಶ್, ಎನ್. ಈಶ್ವರ, ಪಿ. ಜಗದೀಶ್, ಕಪನಯ್ಯ, ಶಾಂತಮ್ಮ, ವೆಂಕಟವರದಯ್ಯ, ನಾಗಮಾದಯ್ಯ, ನಾರಾಯಣ, ತಾಯಿಮುದ್ದಮ್ಮ, ಮಹದೇವಮ್ಮ, ತಿಮ್ಮಯ್ಯ ಹಾಲು ಪರೀಕ್ಷಕ ಸಿದ್ದರಾಮಯ್ಯ, ಶುಚಿಗಾರ ಜೆ. ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>