ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಪೌರಾಯುಕ್ತರಾಗಿ ನಂದಕುಮಾರ್ ನೇಮಕ

Last Updated 13 ನವೆಂಬರ್ 2020, 17:05 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿನ ನಗರಸಭೆ ಆಯುಕ್ತರನ್ನಾಗಿ ಬಿ. ನಂದಕುಮಾರ್‍ ಅವರನ್ನು ನೇಮಿಸಿ ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ.

ನಂದಕುಮಾರ್‌ ಸಾರಿಗೆ ಇಲಾಖೆಯಲ್ಲಿ ಶಾಖಾಧಿಕಾರಿ ಆಗಿದ್ದು, ಅವರನ್ನು ಮಾತೃ ಇಲಾಖೆಯಿಂದ ಪೌರಾಯುಕ್ತ ಹುದ್ದೆಗೆ ನಿಯೋಜನೆ ಮಾಡಲಾಗಿದೆ. ಈ ಹಿಂದೆ ಇಲ್ಲಿ ಪೌರಾಯುಕ್ತೆ ಆಗಿದ್ದ ಬಿ. ಶುಭಾ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಅಲ್ಲಿಂದ ಕೆಲವು ದಿನಗಳ ಕಾಲ ಈ ಹುದ್ದೆ ಭರ್ತಿ ಆಗಿರಲಿಲ್ಲ. ನಗರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತಾವಧಿ ಮುಗಿದು ಎರಡು ವರ್ಷವೇ ಕಳೆದಿದೆ. ಇತ್ತ ಪೂರ್ಣಾವಧಿ ಪೌರಾಯುಕ್ತರು ಇಲ್ಲದೇ ಆಡಳಿತಕ್ಕೆ ಹಿನ್ನೆಡೆಯಾಗಿತ್ತು. ಈ ಹೊತ್ತಿನಲ್ಲೇ ಸರ್ಕಾರ ಹೊಸ ಆಯುಕ್ತರನ್ನು ನೇಮಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT