<p><strong>ಮಾಗಡಿ:</strong> ತಾಲ್ಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿದೆ. ಕಾಮಗಾರಿ ಸ್ಥಳಕ್ಕೆ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪಶೀಲನೆ ನಡೆಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಪುರುಷೋತ್ತಮ್ ಒತ್ತಾಯಿಸಿದರು.</p>.<p>ತಾಲ್ಲೂಕಿನ ವಿಶ್ವನಾಥಪುರ ಬಳಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಗುಂಡು ತೋಪಿನ ಕಟ್ಟೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ₹4.85ಲಕ್ಷ ವೆಚ್ಚದಲ್ಲಿ ವಿಶ್ವನಾಥಪುರ ಗುಂಡು ತೋಪಿನ ಅಭಿವೃದ್ಧಿ ಕಾಮಗಾರಿಯಲ್ಲಿ ಯಂತ್ರ ಬಳಕೆ ಮಾಡಲಾಗಿದೆ. ಈ ಬಗ್ಗೆ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿದೇವಿ ಅವರನ್ನು ಪ್ರಶ್ನಿಸಿದರೆ, ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸಿದ್ದಾರೆ ಎನ್ನುತ್ತಾರೆ. ಆದರೆ, ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಆರೋಪಿಸಿದರು.</p>.<p>ಈ ಬಗ್ಗೆ ಸಮಗ್ರ ತನಿಖೆ ನಡೆಸದಿದ್ದರೆ ಗ್ರಾ.ಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಪುರುಷೋತ್ತಮ್ ಎಚ್ಚರಿಸಿದರು.</p>.<p>ವಿಶ್ವನಾಥಪುರ ಗುಂಡು ತೋಪಿನ ಕಟ್ಟೆ ಹೂಳೆತ್ತುವ ಕಾಮಗಾರಿಯನ್ನು ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರು ಮಾಡಿದ್ದಾರೆ. ಈ ಬಗ್ಗೆ ಎಂಜಿನಿಯಂರ್ ಆಳತೆ ಪುಸ್ತಕದಲ್ಲಿ ನಮೂದಿಸಿದ್ದು, ಅಧ್ಯಕ್ಷರು ಸಹಿ ಹಾಕಿರುವುದರಿಂದ ಬಿಲ್ ಪಾವತಿಸಬೇಕು ಎನ್ನುತ್ತಾರೆ ನೇತೇಹಳ್ಳಿ ಪಿಡಿಒ.ಎಸ್. ರಾಕೇಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ತಾಲ್ಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿದೆ. ಕಾಮಗಾರಿ ಸ್ಥಳಕ್ಕೆ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪಶೀಲನೆ ನಡೆಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಪುರುಷೋತ್ತಮ್ ಒತ್ತಾಯಿಸಿದರು.</p>.<p>ತಾಲ್ಲೂಕಿನ ವಿಶ್ವನಾಥಪುರ ಬಳಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಗುಂಡು ತೋಪಿನ ಕಟ್ಟೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ₹4.85ಲಕ್ಷ ವೆಚ್ಚದಲ್ಲಿ ವಿಶ್ವನಾಥಪುರ ಗುಂಡು ತೋಪಿನ ಅಭಿವೃದ್ಧಿ ಕಾಮಗಾರಿಯಲ್ಲಿ ಯಂತ್ರ ಬಳಕೆ ಮಾಡಲಾಗಿದೆ. ಈ ಬಗ್ಗೆ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿದೇವಿ ಅವರನ್ನು ಪ್ರಶ್ನಿಸಿದರೆ, ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸಿದ್ದಾರೆ ಎನ್ನುತ್ತಾರೆ. ಆದರೆ, ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಆರೋಪಿಸಿದರು.</p>.<p>ಈ ಬಗ್ಗೆ ಸಮಗ್ರ ತನಿಖೆ ನಡೆಸದಿದ್ದರೆ ಗ್ರಾ.ಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಪುರುಷೋತ್ತಮ್ ಎಚ್ಚರಿಸಿದರು.</p>.<p>ವಿಶ್ವನಾಥಪುರ ಗುಂಡು ತೋಪಿನ ಕಟ್ಟೆ ಹೂಳೆತ್ತುವ ಕಾಮಗಾರಿಯನ್ನು ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರು ಮಾಡಿದ್ದಾರೆ. ಈ ಬಗ್ಗೆ ಎಂಜಿನಿಯಂರ್ ಆಳತೆ ಪುಸ್ತಕದಲ್ಲಿ ನಮೂದಿಸಿದ್ದು, ಅಧ್ಯಕ್ಷರು ಸಹಿ ಹಾಕಿರುವುದರಿಂದ ಬಿಲ್ ಪಾವತಿಸಬೇಕು ಎನ್ನುತ್ತಾರೆ ನೇತೇಹಳ್ಳಿ ಪಿಡಿಒ.ಎಸ್. ರಾಕೇಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>