<p><strong>ಕನಕಪುರ</strong>: ನರೇಗಾ ಕೂಲಿ ಹಣ ಸರ್ಕಾರಿ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮೃತಪಟ್ಟವರ ಹೆಸರಿಗೂ ಪಾವತಿಯಾಗಿರುವುದು ಚಾಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾಜಿಕ ಪರಿಶೋಧನೆ ವರದಿಯಲ್ಲಿ ಬಹಿರಂಗಗೊಂಡಿದೆ.</p>.<p>ತಾಲ್ಲೂಕಿನ ಕಸಬಾ ಹೋಬಳಿ ಚಾಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ನಡೆದ ಸಾಮಾಜಿಕ ಪರಿಶೋಧನಾ ವರದಿ ಮಂಡನೆ ಸಭೆಯಲ್ಲಿ ಪರಿಶೋಧನಾ ಸಮಿತಿಯ ಸಂಯೋಜಕ ಚೇತನ್ಕುಮಾರ್ ಕಾಮಗಾರಿಗಳ ಲೋಪವನ್ನು ಸಭೆಗೆ ತಿಳಿಸಿದರು.</p>.<p>‘ನಮ್ಮ ಹೊಲ ನಮ್ಮ ರಸ್ತೆ’ ಯೋಜನೆ ಅಡಿಯಲ್ಲಿ ಸರ್ಕಾರಿ ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶವಿದೆ. ಆದರೆ ಖಾಸಗಿ ವ್ಯಕ್ತಿಗೆ ಅನುಕೂಲವಾಗುವಂತೆ ರಸ್ತೆ ಅಭಿವೃದ್ಧಿ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>ಕಾಮಗಾರಿ ನಡೆದ ದಿನಗಳಿಗಿಂತ ಹೆಚ್ಚು ಹಣ ಬಿಡುಗಡೆ ಮಾಡಿ, ಸರ್ಕಾರಕ್ಕೆ ವಂಚಿಸಲಾಗಿದೆ. ಎರಡು ಕಾಮಗಾರಿಗಳಲ್ಲಿ 208 ಮೀಟರ್ ಮತ್ತು 75 ಮೀಟರ್ ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿಯಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 982 ಕಾಮಗಾರಿ ಮಾಡಿದ್ದು, ₹2.64 ಕೋಟಿ ಖರ್ಚಾಗಿದೆ.<br>18 ಅಪೂರ್ಣ ಕಾಮಗಾರಿಗಳಿಗೆ ಹಣ ಪಾವತಿಯಾಗಿದೆ. ಕೆಲವು ಕಾಮಗಾರಿಗಳನ್ನು ಒಡೆದು ಹಾಕಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕಾಮಗಾರಿಗಳಲ್ಲಿ ಆಗಿರುವ ಲೋಪಗಳನ್ನು ನಿಗದಿತ ಕಾಲಾವಧಿಯಲ್ಲಿ ಸರಿಪಡಿಸಬೇಕು. ಇಲ್ಲದಿದ್ದರೆ ಹಣ ಮರುಪಾವತಿಸಬೇಕು ಎಂದು ಸೂಚಿಸಿದರು.</p>.<p>ಶಿಕ್ಷಣ ಇಲಾಖೆ ಎಸ್.ಮುರುಳಿಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ, ಉಪಾಧ್ಯಕ್ಷ ಗಂಗರಾಜು, ಪಿಡಿಒ ವಿನುತ, ಶಿಕ್ಷಣ ಇಲಾಖೆ ಸಿಆರ್ಪಿ ದೀಪಕ್, ರೇಷ್ಮೆ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು, ಕಾಮಗಾರಿ ಮೇಲ್ವಿಚಾರಕ ಭರತ್, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ನರೇಗಾ ಕೂಲಿ ಹಣ ಸರ್ಕಾರಿ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮೃತಪಟ್ಟವರ ಹೆಸರಿಗೂ ಪಾವತಿಯಾಗಿರುವುದು ಚಾಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾಜಿಕ ಪರಿಶೋಧನೆ ವರದಿಯಲ್ಲಿ ಬಹಿರಂಗಗೊಂಡಿದೆ.</p>.<p>ತಾಲ್ಲೂಕಿನ ಕಸಬಾ ಹೋಬಳಿ ಚಾಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ನಡೆದ ಸಾಮಾಜಿಕ ಪರಿಶೋಧನಾ ವರದಿ ಮಂಡನೆ ಸಭೆಯಲ್ಲಿ ಪರಿಶೋಧನಾ ಸಮಿತಿಯ ಸಂಯೋಜಕ ಚೇತನ್ಕುಮಾರ್ ಕಾಮಗಾರಿಗಳ ಲೋಪವನ್ನು ಸಭೆಗೆ ತಿಳಿಸಿದರು.</p>.<p>‘ನಮ್ಮ ಹೊಲ ನಮ್ಮ ರಸ್ತೆ’ ಯೋಜನೆ ಅಡಿಯಲ್ಲಿ ಸರ್ಕಾರಿ ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶವಿದೆ. ಆದರೆ ಖಾಸಗಿ ವ್ಯಕ್ತಿಗೆ ಅನುಕೂಲವಾಗುವಂತೆ ರಸ್ತೆ ಅಭಿವೃದ್ಧಿ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>ಕಾಮಗಾರಿ ನಡೆದ ದಿನಗಳಿಗಿಂತ ಹೆಚ್ಚು ಹಣ ಬಿಡುಗಡೆ ಮಾಡಿ, ಸರ್ಕಾರಕ್ಕೆ ವಂಚಿಸಲಾಗಿದೆ. ಎರಡು ಕಾಮಗಾರಿಗಳಲ್ಲಿ 208 ಮೀಟರ್ ಮತ್ತು 75 ಮೀಟರ್ ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿಯಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 982 ಕಾಮಗಾರಿ ಮಾಡಿದ್ದು, ₹2.64 ಕೋಟಿ ಖರ್ಚಾಗಿದೆ.<br>18 ಅಪೂರ್ಣ ಕಾಮಗಾರಿಗಳಿಗೆ ಹಣ ಪಾವತಿಯಾಗಿದೆ. ಕೆಲವು ಕಾಮಗಾರಿಗಳನ್ನು ಒಡೆದು ಹಾಕಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕಾಮಗಾರಿಗಳಲ್ಲಿ ಆಗಿರುವ ಲೋಪಗಳನ್ನು ನಿಗದಿತ ಕಾಲಾವಧಿಯಲ್ಲಿ ಸರಿಪಡಿಸಬೇಕು. ಇಲ್ಲದಿದ್ದರೆ ಹಣ ಮರುಪಾವತಿಸಬೇಕು ಎಂದು ಸೂಚಿಸಿದರು.</p>.<p>ಶಿಕ್ಷಣ ಇಲಾಖೆ ಎಸ್.ಮುರುಳಿಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ, ಉಪಾಧ್ಯಕ್ಷ ಗಂಗರಾಜು, ಪಿಡಿಒ ವಿನುತ, ಶಿಕ್ಷಣ ಇಲಾಖೆ ಸಿಆರ್ಪಿ ದೀಪಕ್, ರೇಷ್ಮೆ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು, ಕಾಮಗಾರಿ ಮೇಲ್ವಿಚಾರಕ ಭರತ್, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>