<p><strong>ಚನ್ನಪಟ್ಟಣ:</strong> ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಗರದ ಕೊಲ್ಲಾಪುರಮ್ಮ ದೇವಸ್ಥಾನದ ಆವರಣದಲ್ಲಿ ಬುಧವಾರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. </p>.<p>ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸದ ಡಾ.ಸಿ.ಎನ್.ಮಂಜುನಾಥ್, ದೇಶದ ಎಲ್ಲ ವರ್ಗಗಳಿಗೆ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>‘ದೇಶದ ರಕ್ಷಣೆಯಲ್ಲಿ ಅವರ ಜಾಣ್ಮೆಯ ಆಡಳಿತ ವಿಶ್ವಕ್ಕೆ ಮಾದರಿ. ಇಂದು ಅಮೆರಿಕಾದಂಥ ದೇಶವೇ ನಮ್ಮ ದೇಶದ ಮುಂದೆ ತಲೆಬಾಗುತ್ತಿದೆ. ಇಂತಹ ಪ್ರಧಾನಿಯನ್ನು ಪಡೆದಿರುವ ದೇಶದ ಪ್ರಜೆಗಳು ಪುಣ್ಯವಂತರು’ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ, ‘ಮೋದಿ ಅವರು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ದೇಶ ರಕ್ಷಣೆಗೆ ಅವರು ಕೈಗೊಳ್ಳುವ ನಿರ್ಧಾರಗಳು ಸಾಮಾನ್ಯ ಜನರಿಗೂ ಇಷ್ಟವಾಗುತ್ತಿವೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮತ್ತು ಜೀವಾಮೃತ ರಕ್ತನಿಧಿ ಕೇಂದ್ರ ಸಹಕಾರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. </p>.<p>ಎಲೇಕೇರಿ ರವೀಶ್, ಕೆ.ಟಿ. ಜಯರಾಂ, ಹುಲುವಾಡಿ ದೇವರಾಜು, ವಿಷಕಂಠು, ಸಂತೋಷ್, ಸಿಂಗ್, ಕೋಟೆ ಆನಂದ್, ಸೂರಪ್ಪಗೌಡ, ಮಾಳಗಾಳು ರಾಮು ಸೇರಿದಂತೆ ಹಲವಾರು ಬಿಜೆಪಿ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಗರದ ಕೊಲ್ಲಾಪುರಮ್ಮ ದೇವಸ್ಥಾನದ ಆವರಣದಲ್ಲಿ ಬುಧವಾರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. </p>.<p>ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸದ ಡಾ.ಸಿ.ಎನ್.ಮಂಜುನಾಥ್, ದೇಶದ ಎಲ್ಲ ವರ್ಗಗಳಿಗೆ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>‘ದೇಶದ ರಕ್ಷಣೆಯಲ್ಲಿ ಅವರ ಜಾಣ್ಮೆಯ ಆಡಳಿತ ವಿಶ್ವಕ್ಕೆ ಮಾದರಿ. ಇಂದು ಅಮೆರಿಕಾದಂಥ ದೇಶವೇ ನಮ್ಮ ದೇಶದ ಮುಂದೆ ತಲೆಬಾಗುತ್ತಿದೆ. ಇಂತಹ ಪ್ರಧಾನಿಯನ್ನು ಪಡೆದಿರುವ ದೇಶದ ಪ್ರಜೆಗಳು ಪುಣ್ಯವಂತರು’ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ, ‘ಮೋದಿ ಅವರು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ದೇಶ ರಕ್ಷಣೆಗೆ ಅವರು ಕೈಗೊಳ್ಳುವ ನಿರ್ಧಾರಗಳು ಸಾಮಾನ್ಯ ಜನರಿಗೂ ಇಷ್ಟವಾಗುತ್ತಿವೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮತ್ತು ಜೀವಾಮೃತ ರಕ್ತನಿಧಿ ಕೇಂದ್ರ ಸಹಕಾರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. </p>.<p>ಎಲೇಕೇರಿ ರವೀಶ್, ಕೆ.ಟಿ. ಜಯರಾಂ, ಹುಲುವಾಡಿ ದೇವರಾಜು, ವಿಷಕಂಠು, ಸಂತೋಷ್, ಸಿಂಗ್, ಕೋಟೆ ಆನಂದ್, ಸೂರಪ್ಪಗೌಡ, ಮಾಳಗಾಳು ರಾಮು ಸೇರಿದಂತೆ ಹಲವಾರು ಬಿಜೆಪಿ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>