ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ವೈಯಕ್ತಿಕ ಕಾರಣದಿಂದ ತಾವು ರಾಜೀನಾಮೆ ನೀಡುತ್ತಿದ್ದು, ಅದನ್ನು ಅಂಗೀಕರಿಸುವಂತೆ ಕೋರಿದ್ದಾರೆ. ನಟರಾಜು ಸ್ವಚ್ಛ ಶುಕ್ರವಾರ ಅಭಿಯಾನ ಆರಂಭಿಸುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದರು. ಜೊತೆಗೆ ಇ-ಖಾತೆ ಆಂದೋಲನವನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದರು. ಕುಡಿಯುವ ನೀರು ಪೂರೈಕೆ, ಕಲ್ಯಾಣಿಗಳ ಸ್ವಚ್ಛತೆ ಮೊದಲಾದ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದರು.