<p><strong>ಚನ್ನಪಟ್ಟಣ</strong>: ತಾಲ್ಲೂಕಿನ ನೀಲಸಂದ್ರ ಗ್ರಾಮದ ಬೋರೇದೇವರ ಜಾತ್ರಾಮಹೋತ್ಸವ ಹಾಗೂ ರಾಮನವಮಿ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಸಾಗರ್ ಅವರು ಶುಕ್ರವಾರ ಸುಮಾರು ಐದು ಸಾವಿರ ಮಂದಿ ಭಕ್ತರಿಗೆ ಕುಡಿಯುವ ನೀರು, ಮಜ್ಜಿಗೆಯನ್ನು ವಿತರಣೆ ಮಾಡಿದರು.</p>.<p>ಈ ವೇಳೆ ಮಾತನಾಢಿದ ಅವರು, ಬಹಳ ಹಿಂದಿನಿಂದಲೂ ನಮ್ಮ ಕುಟುಂಬ ಬೋರೇದೇವರ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಎಲ್ಲಾ ಭಕ್ತರಿಗೆ ಕುಡಿಯುವ ನೀರು, ಮಜ್ಜಿಗೆ, ಪಾನಕ ವಿತರಣೆ ಮಾಡಿಕೊಂಡು ಬರುವ ಪದ್ಧತಿ ಪಾಲಿಸಿಕೊಂಡು ಬರುತ್ತಿದ್ದಾರೆ. ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದರು.</p>.<p>ಗ್ರಾಮದಲ್ಲಿ ಸುಮಾರು ಐದು ದಿನಗಳ ಕಾಲ ಬೋರೆದೇವರ ಜಾತ್ರಾ ಮಹೋತ್ಸವ ನಡೆಯಲಿದ್ದು, ಪ್ರತಿದಿನವು ನಮ್ಮ ಕುಟುಂಬದಿಂದ ಕುಡಿಯುವ ನೀರು, ಮಜ್ಜಿಗೆಯನ್ನು ವಿತರಣೆ ಮಾಡುತ್ತೇವೆ. ಈ ವರ್ಷ ಬೇಸಿಗೆ ಶಾಖ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಭಕ್ತಾಧಿಗಳಿಗೆ ಕುಡಿಯುವ ನೀರು ಹಾಗೂ ಮಜ್ಜಿಗೆಯ ಅವಶ್ಯಕತೆ ಹೆಚ್ಚಿನ ಪ್ರಮಾಣದಲ್ಲಿ ಇದೆ. ಇಲ್ಲಿಗೆ ಆಗಮಿಸುವ ಎಲ್ಲಾ ಭಕ್ತರಿಗೂ ಕುಡಿಯುವ ನೀರು, ಮಜ್ಜಿಗೆಯನ್ನು ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಶಿವಕುಮಾರ್, ಜಗದೀಶ್, ರಾಜೇಶ್, ನೀಲಸಂದ್ರ ಮಹೇಶ್, ಸುದರ್ಶನ್, ಸುಮಂತ್, ಸುಫಿಸಾದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ನೀಲಸಂದ್ರ ಗ್ರಾಮದ ಬೋರೇದೇವರ ಜಾತ್ರಾಮಹೋತ್ಸವ ಹಾಗೂ ರಾಮನವಮಿ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಸಾಗರ್ ಅವರು ಶುಕ್ರವಾರ ಸುಮಾರು ಐದು ಸಾವಿರ ಮಂದಿ ಭಕ್ತರಿಗೆ ಕುಡಿಯುವ ನೀರು, ಮಜ್ಜಿಗೆಯನ್ನು ವಿತರಣೆ ಮಾಡಿದರು.</p>.<p>ಈ ವೇಳೆ ಮಾತನಾಢಿದ ಅವರು, ಬಹಳ ಹಿಂದಿನಿಂದಲೂ ನಮ್ಮ ಕುಟುಂಬ ಬೋರೇದೇವರ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಎಲ್ಲಾ ಭಕ್ತರಿಗೆ ಕುಡಿಯುವ ನೀರು, ಮಜ್ಜಿಗೆ, ಪಾನಕ ವಿತರಣೆ ಮಾಡಿಕೊಂಡು ಬರುವ ಪದ್ಧತಿ ಪಾಲಿಸಿಕೊಂಡು ಬರುತ್ತಿದ್ದಾರೆ. ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದರು.</p>.<p>ಗ್ರಾಮದಲ್ಲಿ ಸುಮಾರು ಐದು ದಿನಗಳ ಕಾಲ ಬೋರೆದೇವರ ಜಾತ್ರಾ ಮಹೋತ್ಸವ ನಡೆಯಲಿದ್ದು, ಪ್ರತಿದಿನವು ನಮ್ಮ ಕುಟುಂಬದಿಂದ ಕುಡಿಯುವ ನೀರು, ಮಜ್ಜಿಗೆಯನ್ನು ವಿತರಣೆ ಮಾಡುತ್ತೇವೆ. ಈ ವರ್ಷ ಬೇಸಿಗೆ ಶಾಖ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಭಕ್ತಾಧಿಗಳಿಗೆ ಕುಡಿಯುವ ನೀರು ಹಾಗೂ ಮಜ್ಜಿಗೆಯ ಅವಶ್ಯಕತೆ ಹೆಚ್ಚಿನ ಪ್ರಮಾಣದಲ್ಲಿ ಇದೆ. ಇಲ್ಲಿಗೆ ಆಗಮಿಸುವ ಎಲ್ಲಾ ಭಕ್ತರಿಗೂ ಕುಡಿಯುವ ನೀರು, ಮಜ್ಜಿಗೆಯನ್ನು ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಶಿವಕುಮಾರ್, ಜಗದೀಶ್, ರಾಜೇಶ್, ನೀಲಸಂದ್ರ ಮಹೇಶ್, ಸುದರ್ಶನ್, ಸುಮಂತ್, ಸುಫಿಸಾದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>