<p><strong>ಚನ್ನಪಟ್ಟಣ</strong>: ಅಪ್ರತಿಮ ದೇಶಪ್ರೇಮಿ ನೇತಾಜಿ ಸುಭಾಷ್ ಚಂದ್ರ ಬೋಸ್. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಸಮರೋಪಾದಿಯಲ್ಲಿ ಕೈಗೊಂಡ ಹೋರಾಟ ಬ್ರಿಟಿಷರ ಎದೆ ನಡುಗಿಸಿತ್ತು ಎಂದು ಸಾಹಿತಿ ವಿಜಯ್ ರಾಂಪುರ ಬಣ್ಣಿಸಿದರು.</p>.<p>ತಾಲ್ಲೂಕಿನ ವಂದಾರಗುಪ್ಪೆ ಬಳಿ ಹೊಂಬೇಗೌಡ ಐಟಿಐ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಬೋಸ್ ಅವರ ಗೌರವಾರ್ಥ ಈ ದಿನವನ್ನು ಸಾಮಾಜಿಕ ನ್ಯಾಯ ಮತ್ತು ಶೂರತೆ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.</p>.<p>ವಿದ್ಯಾರ್ಥಿ ದಿಸೆಯಲ್ಲಿಯೇ ದೇಶಸೇವೆ ಹಂಬಲ ಹೊತ್ತು ಸ್ವಾತಂತ್ರ್ಯಕ್ಕಾಗಿ ಸಶಸ್ತ್ರ ಹೋರಾಟದ ಹಾದಿ ತುಳಿದರು. ಅದಕ್ಕಾಗಿ ತಮ್ಮ ಹುದ್ದೆ ತ್ಯಜಿಸಿ ತಮ್ಮದೇ ಇಂಡಿಯನ್ ನ್ಯಾಷನಲ್ ಆರ್ಮಿ ಸ್ಥಾಪಿಸಿ ತನ್ನ ಕ್ರಾಂತಿಕಾರಿ ಭಾಷಣಗಳಿಂದ ಭಾರತೀಯ ಯುವಕರನ್ನು ಸೂಜಿಗಲ್ಲಿನಂತೆ ಆಕರ್ಷಿಸಿದರು ಎಂದರು.</p>.<p>ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಆಯಾಮ ನೀಡುವ ಸಲುವಾಗಿ, ದೇಶ–ವಿದೇಶಗಳನ್ನು ಸುತ್ತಿ ತಮ್ಮ ಸೈನ್ಯ ಸಕ್ರಿಯಗೊಳಿಸುತ್ತಿದ್ದರು. ಭಾರತದ ಯುವ ತಲೆಮಾರಿಗೆ ಸ್ಫೂರ್ತಿಯಾಗಿರುವ ಬೋಸ್ ಅವರ ತ್ಯಾಗ ಮತ್ತು ಬಲಿದಾನ ಮಾದರಿಯಾಗಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಹೊಂಬೇಗೌಡ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಆರ್.ಮಹೇಶ್ ಚಂದ್ರ ಮಾತನಾಡಿ, ಈ ಜಗತ್ತು ಕಂಡ ಅಪ್ರತಿಮ ದೇಶಪ್ರೇಮಿ ಸುಭಾಷ್ ಚಂದ್ರ ಬೋಸ್. ಕೋಟ್ಯಂತರ ಭಾರತೀಯರ ಹೃದಯದಲ್ಲಿ ಅಮರರಾಗಿದ್ದಾರೆ ಎಂದರು. </p>.<p>ಪ್ರಾಂಶುಪಾಲ ಡಿ.ಪಿ.ಶಂಕರಲಿಂಗೇಗೌಡ ಮಾತನಾಡಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಎಲ್.ಎಂ.ಮರಿದೇವರು, ಡಿ.ಎಸ್.ಶಿಖರೇಶ್ ಮಾತನಾಡಿದರು. ಉಪನ್ಯಾಸಕ ಶಂಕರ್, ರಜನಿ, ಸುಧಾ, ರೇಣುಕಾರಾಧ್ಯ, ಸಿಬ್ಬಂದಿ ಮುನೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಅಪ್ರತಿಮ ದೇಶಪ್ರೇಮಿ ನೇತಾಜಿ ಸುಭಾಷ್ ಚಂದ್ರ ಬೋಸ್. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಸಮರೋಪಾದಿಯಲ್ಲಿ ಕೈಗೊಂಡ ಹೋರಾಟ ಬ್ರಿಟಿಷರ ಎದೆ ನಡುಗಿಸಿತ್ತು ಎಂದು ಸಾಹಿತಿ ವಿಜಯ್ ರಾಂಪುರ ಬಣ್ಣಿಸಿದರು.</p>.<p>ತಾಲ್ಲೂಕಿನ ವಂದಾರಗುಪ್ಪೆ ಬಳಿ ಹೊಂಬೇಗೌಡ ಐಟಿಐ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಬೋಸ್ ಅವರ ಗೌರವಾರ್ಥ ಈ ದಿನವನ್ನು ಸಾಮಾಜಿಕ ನ್ಯಾಯ ಮತ್ತು ಶೂರತೆ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.</p>.<p>ವಿದ್ಯಾರ್ಥಿ ದಿಸೆಯಲ್ಲಿಯೇ ದೇಶಸೇವೆ ಹಂಬಲ ಹೊತ್ತು ಸ್ವಾತಂತ್ರ್ಯಕ್ಕಾಗಿ ಸಶಸ್ತ್ರ ಹೋರಾಟದ ಹಾದಿ ತುಳಿದರು. ಅದಕ್ಕಾಗಿ ತಮ್ಮ ಹುದ್ದೆ ತ್ಯಜಿಸಿ ತಮ್ಮದೇ ಇಂಡಿಯನ್ ನ್ಯಾಷನಲ್ ಆರ್ಮಿ ಸ್ಥಾಪಿಸಿ ತನ್ನ ಕ್ರಾಂತಿಕಾರಿ ಭಾಷಣಗಳಿಂದ ಭಾರತೀಯ ಯುವಕರನ್ನು ಸೂಜಿಗಲ್ಲಿನಂತೆ ಆಕರ್ಷಿಸಿದರು ಎಂದರು.</p>.<p>ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಆಯಾಮ ನೀಡುವ ಸಲುವಾಗಿ, ದೇಶ–ವಿದೇಶಗಳನ್ನು ಸುತ್ತಿ ತಮ್ಮ ಸೈನ್ಯ ಸಕ್ರಿಯಗೊಳಿಸುತ್ತಿದ್ದರು. ಭಾರತದ ಯುವ ತಲೆಮಾರಿಗೆ ಸ್ಫೂರ್ತಿಯಾಗಿರುವ ಬೋಸ್ ಅವರ ತ್ಯಾಗ ಮತ್ತು ಬಲಿದಾನ ಮಾದರಿಯಾಗಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಹೊಂಬೇಗೌಡ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಆರ್.ಮಹೇಶ್ ಚಂದ್ರ ಮಾತನಾಡಿ, ಈ ಜಗತ್ತು ಕಂಡ ಅಪ್ರತಿಮ ದೇಶಪ್ರೇಮಿ ಸುಭಾಷ್ ಚಂದ್ರ ಬೋಸ್. ಕೋಟ್ಯಂತರ ಭಾರತೀಯರ ಹೃದಯದಲ್ಲಿ ಅಮರರಾಗಿದ್ದಾರೆ ಎಂದರು. </p>.<p>ಪ್ರಾಂಶುಪಾಲ ಡಿ.ಪಿ.ಶಂಕರಲಿಂಗೇಗೌಡ ಮಾತನಾಡಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಎಲ್.ಎಂ.ಮರಿದೇವರು, ಡಿ.ಎಸ್.ಶಿಖರೇಶ್ ಮಾತನಾಡಿದರು. ಉಪನ್ಯಾಸಕ ಶಂಕರ್, ರಜನಿ, ಸುಧಾ, ರೇಣುಕಾರಾಧ್ಯ, ಸಿಬ್ಬಂದಿ ಮುನೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>