ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 25, ಕನಕಪುರ ತಾಲ್ಲೂಕಿನಲ್ಲಿ 18, ಮಾಗಡಿ ತಾಲ್ಲೂಕಿನಲ್ಲಿ 27 ಹಾಗೂ ರಾಮನಗರ ತಾಲ್ಲೂಕಿನಲ್ಲಿ 26 ಜನ ಸೇರಿ ಒಟ್ಟಾರೆ 96 ಜನರು ಶುಕ್ರವಾರ ಗುಣಮುಖರಾಗಿದ್ದು, ಕೋವಿಡ್ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3985 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 948, ಕನಕಪುರ 800, ಮಾಗಡಿ 552 ಮತ್ತು ರಾಮನಗರ 1685 ಜನರು ಸೇರಿದ್ದಾರೆ. ಇನ್ನೂ 894 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.