ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: 97 ಮಂದಿಗೆ ಸೋಂಕು: 100 ಮಂದಿ ಗುಣಮುಖ

Last Updated 7 ಅಕ್ಟೋಬರ್ 2020, 13:41 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಬುಧವಾರ 97 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 19, ಕನಕಪುರ 36, ಮಾಗಡಿ 16 ಮತ್ತು ರಾಮನಗರ 26 ಪ್ರಕರಣಗಳು ಇದರಲ್ಲಿ ಸೇರಿವೆ. ಒಟ್ಟಾರೆ ಸೋಂಕಿತರ ಸಂಖ್ಯೆ 6105ಕ್ಕೆ ಏರಿಕೆ ಆಗಿದೆ. ಈ ಪೈಕಿ ಚನ್ನಪಟ್ಟಣ 1449, ಕನಕಪುರ 1328, ಮಾಗಡಿ 963 ಮತ್ತು ರಾಮನಗರ 2365 ಸೋಂಕಿತರು ಪತ್ತೆ ಆಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೇ ರಾಮನಗರದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಒಟ್ಟಾರೆ 58 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 16, ಕನಕಪುರ ತಾಲ್ಲೂಕಿನಲ್ಲಿ 27, ಮಾಗಡಿ ತಾಲ್ಲೂಕಿನಲ್ಲಿ 19 ಹಾಗೂ ರಾಮನಗರ ತಾಲ್ಲೂಕಿನಲ್ಲಿ 38 ಜನ ಸೇರಿ ಒಟ್ಟಾರೆ 100 ಜನರು ಬುಧವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5262 ಜನರು ಗುಣಮುಖರಾಗಿದ್ದಾರೆ. ಇನ್ನೂ 785 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT