<p><strong>ರಾಮನಗರ: </strong>ಜಿಲ್ಲೆಯಲ್ಲಿ ಸೋಮವಾರ 29 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 262ಕ್ಕೆ ಏರಿಕೆ ಆಗಿದೆ.</p>.<p>ಮಾಗಡಿ ತಾಲ್ಲೂಕಿನಲ್ಲಿ 11, ರಾಮನಗರ ತಾಲ್ಲೂಕಿನಲ್ಲಿ 11, ಕನಕಪುರ ತಾಲೂಕಿನಲ್ಲಿ 4 ಹಾಗೂ ಚನ್ನಪಟ್ಟಣ ತಾಲ್ಲೂಕಿನಲ್ಲಿ 3 ಪ್ರಕರಣ ವರದಿಯಾಗಿವೆ. ಸೋಂಕಿತರನ್ನು ರಾಮನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>ಪೊಲೀಸರಿಗೆ ಸೋಂಕು</strong>: ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಠಾಣೆಯನ್ನು ಸದ್ಯ ಸೀಲ್ಡೌನ್ ಮಾಡಲಾಗಿದ್ದು, ಮುಂದಿನ ಕೆಲ ದಿನ ಕಾಲ ಬಂದ್ ಆಗಿಯೇ ಇರಲಿದೆ. ಎಸ್ಐ ಸಂಪರ್ಕಕ್ಕೆ ಬಂದಿರುವ ಸಿಬ್ಬಂದಿಯ ಕ್ವಾರಂಟೈನ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ.</p>.<p>ರಾಮನಗರದ ಪೊಲೀಸ್ ವಸತಿ ಗೃಹದಲ್ಲಿ ವಾಸವಿದ್ದ ಡಿಸಿಆರ್ಬಿ ಮಹಿಳಾ ಕಾನ್ಸ್ಟೆಬಲ್ ಒಬ್ಬರಿಗೂ ಕೊರೊನಾ ಸೋಂಕು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ಮನೆಯವರನ್ನು ಕ್ವಾರಂಟೈನ್ ಮಾಡಲಾಗಿದೆ. ರಾಮನಗರದ ರಾಯರದೊಡ್ಡಿ, ಗೀತಾಮಂದಿರ ಬಡಾವಣೆ ಮೊದಲಾದ ಪ್ರದೇಶಗಳಲ್ಲೂ ಸೋಂಕಿತರು ಪತ್ತೆಯಾಗಿದ್ದಾರೆ. ಆದರೆ ಸದ್ಯ ಈ ಪ್ರದೇಶಗಳನ್ನು ಸೀಲ್ಡೌನ್ ಮಾಡಿಲ್ಲ. ಕೆಂಪೇಗೌಡನದೊಡ್ಡಿ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದವರ ಪೈಕಿ ಒಬ್ಬರಿಗೆ ಸೋಂಕು ಖಾತ್ರಿಯಾದ ಹಿನ್ನೆಲೆಯಲ್ಲಿ ಉಳಿದವರನ್ನೂ ಮತ್ತೆ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಕೈಲಾಂಚ ಹೋಬಳಿಯ ಚನ್ನಮಾನಹಳ್ಳಿ ಸೇರಿದಂತೆ ಹಲವು ಗ್ರಾಮಗಳು ಸೀಲ್ಡೌನ್ ಆಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಜಿಲ್ಲೆಯಲ್ಲಿ ಸೋಮವಾರ 29 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 262ಕ್ಕೆ ಏರಿಕೆ ಆಗಿದೆ.</p>.<p>ಮಾಗಡಿ ತಾಲ್ಲೂಕಿನಲ್ಲಿ 11, ರಾಮನಗರ ತಾಲ್ಲೂಕಿನಲ್ಲಿ 11, ಕನಕಪುರ ತಾಲೂಕಿನಲ್ಲಿ 4 ಹಾಗೂ ಚನ್ನಪಟ್ಟಣ ತಾಲ್ಲೂಕಿನಲ್ಲಿ 3 ಪ್ರಕರಣ ವರದಿಯಾಗಿವೆ. ಸೋಂಕಿತರನ್ನು ರಾಮನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>ಪೊಲೀಸರಿಗೆ ಸೋಂಕು</strong>: ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಠಾಣೆಯನ್ನು ಸದ್ಯ ಸೀಲ್ಡೌನ್ ಮಾಡಲಾಗಿದ್ದು, ಮುಂದಿನ ಕೆಲ ದಿನ ಕಾಲ ಬಂದ್ ಆಗಿಯೇ ಇರಲಿದೆ. ಎಸ್ಐ ಸಂಪರ್ಕಕ್ಕೆ ಬಂದಿರುವ ಸಿಬ್ಬಂದಿಯ ಕ್ವಾರಂಟೈನ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ.</p>.<p>ರಾಮನಗರದ ಪೊಲೀಸ್ ವಸತಿ ಗೃಹದಲ್ಲಿ ವಾಸವಿದ್ದ ಡಿಸಿಆರ್ಬಿ ಮಹಿಳಾ ಕಾನ್ಸ್ಟೆಬಲ್ ಒಬ್ಬರಿಗೂ ಕೊರೊನಾ ಸೋಂಕು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ಮನೆಯವರನ್ನು ಕ್ವಾರಂಟೈನ್ ಮಾಡಲಾಗಿದೆ. ರಾಮನಗರದ ರಾಯರದೊಡ್ಡಿ, ಗೀತಾಮಂದಿರ ಬಡಾವಣೆ ಮೊದಲಾದ ಪ್ರದೇಶಗಳಲ್ಲೂ ಸೋಂಕಿತರು ಪತ್ತೆಯಾಗಿದ್ದಾರೆ. ಆದರೆ ಸದ್ಯ ಈ ಪ್ರದೇಶಗಳನ್ನು ಸೀಲ್ಡೌನ್ ಮಾಡಿಲ್ಲ. ಕೆಂಪೇಗೌಡನದೊಡ್ಡಿ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದವರ ಪೈಕಿ ಒಬ್ಬರಿಗೆ ಸೋಂಕು ಖಾತ್ರಿಯಾದ ಹಿನ್ನೆಲೆಯಲ್ಲಿ ಉಳಿದವರನ್ನೂ ಮತ್ತೆ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಕೈಲಾಂಚ ಹೋಬಳಿಯ ಚನ್ನಮಾನಹಳ್ಳಿ ಸೇರಿದಂತೆ ಹಲವು ಗ್ರಾಮಗಳು ಸೀಲ್ಡೌನ್ ಆಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>