ನಗರದಲ್ಲಿ ಶನಿವಾರ ನಡೆದ ಪಂಚರತ್ನ ರಥಯಾತ್ರೆ ಸಂದರ್ಭ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಈ ಘೋಷಣೆ ಮಾಡಿದರು. ‘ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು. ಇದಕ್ಕೆಲ್ಲ ತೆರೆ ಎಳೆಯಬೇಕು ಎಂದೇ ಇಂದು ಈ ಘೋಷಣೆ ಮಾಡಿದ್ದೇನೆ. 2023ರ ಚುನಾವಣೆಯಲ್ಲಿ ನನ್ನ ಮಗನನ್ನು ಈ ಕ್ಷೇತ್ರದಿಂದ ಅಭ್ಯರ್ಥಿಯಾಗಿಸಲು ತೀರ್ಮಾನಿಸಿದ್ದೇವೆ. ನಮ್ಮ ಕುಟುಂಬಕ್ಕೆ ಆಶೀರ್ವಾದ ನೀಡಿದಂತೆ ಅವನನ್ನೂ ಬೆಂಬಲಿಸಬೇಕು’ ಎಂದು ಕೋರಿದರು.