<p><strong>ಮಾಗಡಿ</strong>: 2028ರ ಚುನಾವಣೆಯಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ನಾನು ಜೆಡಿಎಸ್ ಶಾಸಕನಾಗಿ ಆಯ್ಕೆಯಾಗುವುದರಲ್ಲಿ ಅನುಮಾನವಿಲ್ಲ ಎಂದು ಮಾಜಿ ಶಾಸಕ ಎ.ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿದ ಅವರು, ಅಧಿಕಾರ ಪಡೆಯಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಈ ಬಗ್ಗೆ ನನ್ನ ಜೊತೆ ಚರ್ಚಿಸಿಲ್ಲ. ಪಕ್ಷ ತೊರೆದಿರುವ ಎಲ್ಲಾ ನಾಯಕರ ಭವಿಷ್ಯ ಉಜ್ವಲವಾಗಲಿ. ಈ ಬಗ್ಗೆ ಹೆಚ್ಚು ಚರ್ಚೆ ಅನಗತ್ಯ ಎಂದರು.</p>.<p>ನಮ್ಮ ಕಾರ್ಯಕರ್ತರಿಗೆ ಪಕ್ಷದ ಸದಸ್ಯತ್ವ ಕೊಡುವ ನಿಟ್ಟಿನಲ್ಲಿ ಅಭಿಯಾನ ನಡೆಸುತ್ತಿದ್ದು, ಮಾಗಡಿಯಲ್ಲಿ ಜೆಡಿಎಸ್ ಪಕ್ಷದ ದೊಡ್ಡ ಸಮಾವೇಶ ಮಾಡಲಾಗುವುದು. 2028ರ ಚುನಾವಣೆಯಲ್ಲಿ ನಾನು ಮತ್ತೊಮ್ಮೆ ಶಾಸಕನಾಗಿ ಜನ ಸೇವೆ ಮಾಡುತ್ತೇನೆ ಎಂದರು.</p>.<p>ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿಚಾರವಾಗಿ ಸಂಸದ ಮಂಜುನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ಅವರೇ ಈ ಸಮಸ್ಯೆ ಬಗೆಹರಿಸಲಿ. ನಮ್ಮ ಪಾಲಿನ ನೀರನ್ನು ನಮಗೆ ಹರಿಸಲು ವಿರೋಧ ಮಾಡುವುದು ಸರಿಯಲ್ಲ ಎಂದು ಟೀಕಿಸಿದರು.</p>.<p>ತಗ್ಗೀಕುಪ್ಪೆ ರಾಮಣ್ಣ, ಮಾರುತಿಗೌಡ, ಹೊಸಹಳ್ಳಿ ರಂಗಣಿ, ಕುಮಾರ್, ವಿಜಯಕುಮಾರ್, ಕೆ.ವಿ.ಬಾಲು, ಅರವಿಂದ ರಾಜೇಂದ್ರ, ರಮೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: 2028ರ ಚುನಾವಣೆಯಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ನಾನು ಜೆಡಿಎಸ್ ಶಾಸಕನಾಗಿ ಆಯ್ಕೆಯಾಗುವುದರಲ್ಲಿ ಅನುಮಾನವಿಲ್ಲ ಎಂದು ಮಾಜಿ ಶಾಸಕ ಎ.ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿದ ಅವರು, ಅಧಿಕಾರ ಪಡೆಯಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಈ ಬಗ್ಗೆ ನನ್ನ ಜೊತೆ ಚರ್ಚಿಸಿಲ್ಲ. ಪಕ್ಷ ತೊರೆದಿರುವ ಎಲ್ಲಾ ನಾಯಕರ ಭವಿಷ್ಯ ಉಜ್ವಲವಾಗಲಿ. ಈ ಬಗ್ಗೆ ಹೆಚ್ಚು ಚರ್ಚೆ ಅನಗತ್ಯ ಎಂದರು.</p>.<p>ನಮ್ಮ ಕಾರ್ಯಕರ್ತರಿಗೆ ಪಕ್ಷದ ಸದಸ್ಯತ್ವ ಕೊಡುವ ನಿಟ್ಟಿನಲ್ಲಿ ಅಭಿಯಾನ ನಡೆಸುತ್ತಿದ್ದು, ಮಾಗಡಿಯಲ್ಲಿ ಜೆಡಿಎಸ್ ಪಕ್ಷದ ದೊಡ್ಡ ಸಮಾವೇಶ ಮಾಡಲಾಗುವುದು. 2028ರ ಚುನಾವಣೆಯಲ್ಲಿ ನಾನು ಮತ್ತೊಮ್ಮೆ ಶಾಸಕನಾಗಿ ಜನ ಸೇವೆ ಮಾಡುತ್ತೇನೆ ಎಂದರು.</p>.<p>ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿಚಾರವಾಗಿ ಸಂಸದ ಮಂಜುನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ಅವರೇ ಈ ಸಮಸ್ಯೆ ಬಗೆಹರಿಸಲಿ. ನಮ್ಮ ಪಾಲಿನ ನೀರನ್ನು ನಮಗೆ ಹರಿಸಲು ವಿರೋಧ ಮಾಡುವುದು ಸರಿಯಲ್ಲ ಎಂದು ಟೀಕಿಸಿದರು.</p>.<p>ತಗ್ಗೀಕುಪ್ಪೆ ರಾಮಣ್ಣ, ಮಾರುತಿಗೌಡ, ಹೊಸಹಳ್ಳಿ ರಂಗಣಿ, ಕುಮಾರ್, ವಿಜಯಕುಮಾರ್, ಕೆ.ವಿ.ಬಾಲು, ಅರವಿಂದ ರಾಜೇಂದ್ರ, ರಮೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>