<p><strong>ಮಾಗಡಿ:</strong> ಶಾಸಕ ಬಾಲಕೃಷ್ಣ ಕುಟುಂಬದ ಮೇಲೆ ಮಾಜಿ ಶಾಸಕ ಎ.ಮಂಜುನಾಥ್ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಬಮೂಲ್ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಬಿಡಿಸಿಸಿ ಬ್ಯಾಂಕ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಾಲಕೃಷ್ಣ ಅವರು ವಾಮಮಾರ್ಗದಲ್ಲಿ ಸಹಕಾರಿ ಕ್ಷೇತ್ರವನ್ನು ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದು ಸರಿಯಲ್ಲ ಎಂದರು.</p>.<p>ಕೆಂಪೇಗೌಡರ ಮನೆತನಕ್ಕೆ ಸಹಾಯ ಮಾಡಿದ್ದು ಬಾಲಕೃಷ್ಣ ಹೊರತು; ಮಂಜುನಾಥ್ ಅವರು ಅಲ್ಲ. ಕೆಂಪೇಗೌಡರ ಕುಟುಂಬ ಮತ್ತು ಬಾಲಕೃಷ್ಣ ಅವರ ನಡುವೆ ಬಿರುಕು ಮೂಡಿಸಲು ಹೊರಟಿದ್ದಾರೆ ಎಂದರು. </p>.<p>ಬೆಟ್ಟಸ್ವಾಮಿಗೌಡರ ಕುಟುಂಬಕ್ಕೂ ಬಾಲಕೃಷ್ಣ ಅವರು ರಾಜಕೀಯವಾಗಿ ನೆರವು ನೀಡಿದ್ದಾರೆ. ಇದನ್ನು ಮಂಜುನಾಥ್ ಅವರು ಮರೆತಿರಬಹುದು ಎಂದರು.</p>.<p>ಬಮೂಲ್ ನಿರ್ದೇಶಕ ಸ್ಥಾನದ ಅಭ್ಯರ್ಥಿ ಎಚ್.ಎನ್ ಅಶೋಕ್ ಮಾತನಾಡಿ, ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮಾಗಡಿಯಲ್ಲಿ ನಡೆದ ₹600 ಕೋಟಿ ಹಗರಣದಲ್ಲಿ ಬಾಲಕೃಷ್ಣ ಅವರ ಹೆಸರು ಸುಖಾಸುಮ್ಮನೆ ಮಂಜುನಾಥ್ ಎಳೆದು ತರುತ್ತಿದ್ದಾರೆ. ರಾಜಕೀಯವಾಗಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಹೇಳಿದರು. </p>.<p>ಕಾಂಗ್ರೆಸ್ ಮುಖಂಡರಾದ ಜೆ.ಪಿ.ಚಂದ್ರೇಗೌಡ, ಕುಮಾರ್, ಪಾಪಣ್ಣಿ, ನರೇಂದ್ರ, ಶಿವಣ್ಣ, ಮಂಜುನಾಥ್,ಅಜ್ಜನಹಳ್ಳಿ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಶಾಸಕ ಬಾಲಕೃಷ್ಣ ಕುಟುಂಬದ ಮೇಲೆ ಮಾಜಿ ಶಾಸಕ ಎ.ಮಂಜುನಾಥ್ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಬಮೂಲ್ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಬಿಡಿಸಿಸಿ ಬ್ಯಾಂಕ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಾಲಕೃಷ್ಣ ಅವರು ವಾಮಮಾರ್ಗದಲ್ಲಿ ಸಹಕಾರಿ ಕ್ಷೇತ್ರವನ್ನು ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದು ಸರಿಯಲ್ಲ ಎಂದರು.</p>.<p>ಕೆಂಪೇಗೌಡರ ಮನೆತನಕ್ಕೆ ಸಹಾಯ ಮಾಡಿದ್ದು ಬಾಲಕೃಷ್ಣ ಹೊರತು; ಮಂಜುನಾಥ್ ಅವರು ಅಲ್ಲ. ಕೆಂಪೇಗೌಡರ ಕುಟುಂಬ ಮತ್ತು ಬಾಲಕೃಷ್ಣ ಅವರ ನಡುವೆ ಬಿರುಕು ಮೂಡಿಸಲು ಹೊರಟಿದ್ದಾರೆ ಎಂದರು. </p>.<p>ಬೆಟ್ಟಸ್ವಾಮಿಗೌಡರ ಕುಟುಂಬಕ್ಕೂ ಬಾಲಕೃಷ್ಣ ಅವರು ರಾಜಕೀಯವಾಗಿ ನೆರವು ನೀಡಿದ್ದಾರೆ. ಇದನ್ನು ಮಂಜುನಾಥ್ ಅವರು ಮರೆತಿರಬಹುದು ಎಂದರು.</p>.<p>ಬಮೂಲ್ ನಿರ್ದೇಶಕ ಸ್ಥಾನದ ಅಭ್ಯರ್ಥಿ ಎಚ್.ಎನ್ ಅಶೋಕ್ ಮಾತನಾಡಿ, ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮಾಗಡಿಯಲ್ಲಿ ನಡೆದ ₹600 ಕೋಟಿ ಹಗರಣದಲ್ಲಿ ಬಾಲಕೃಷ್ಣ ಅವರ ಹೆಸರು ಸುಖಾಸುಮ್ಮನೆ ಮಂಜುನಾಥ್ ಎಳೆದು ತರುತ್ತಿದ್ದಾರೆ. ರಾಜಕೀಯವಾಗಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಹೇಳಿದರು. </p>.<p>ಕಾಂಗ್ರೆಸ್ ಮುಖಂಡರಾದ ಜೆ.ಪಿ.ಚಂದ್ರೇಗೌಡ, ಕುಮಾರ್, ಪಾಪಣ್ಣಿ, ನರೇಂದ್ರ, ಶಿವಣ್ಣ, ಮಂಜುನಾಥ್,ಅಜ್ಜನಹಳ್ಳಿ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>