<p><strong>ಬಿಡದಿ:</strong> ಗ್ರಾಮ ಪಂಚಾಯಿತಿಗಳು ಮಿನಿ ಸರ್ಕಾರವಿದ್ದಂತೆ. ಪಂಚಾಯಿತಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿದರೆ ಸರ್ಕಾರ ಮಾಡಬಹುದಾದ ಅನೇಕ ಕಾಮಗಾರಿಗಳನ್ನು ಪಂಚಾಯಿತಿ ಮೂಲಕವೂಮಾಡಬಹುದು ಎಂದು ಶಾಸಕ ಎ. ಮಂಜುನಾಥ್<br />ಅಭಿಪ್ರಾಯಪಟ್ಟರು.</p>.<p>ಹೋಬಳಿಯ ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಸಲ್ಲದು. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಸಂದರ್ಭದಲ್ಲಿನ ರಾಜಕೀಯ ಮರೆತು ಪಂಚಾಯಿತಿ ವ್ಯಾಪ್ತಿಯ ಹಳ್ಳಿಯ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಮತ್ತು ಪಂಚಾಯಿತಿಯ ಸೌಲಭ್ಯ ತಲುಪಿಸುವ ಕೆಲಸ ಆಗಬೇಕು ಎಂದರು.</p>.<p>ಅಧ್ಯಕ್ಷೆ ಸುಮತಿ ನಾಗರಾಜು ಮಾತನಾಡಿ, ನನ್ನ ಮೇಲೆ ವಿಶ್ವಾಸವಿಟ್ಟು ಶಾಸಕರು ಅಧ್ಯಕ್ಷೆಯಾಗಿ ಆಯ್ಕೆ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತ್ತು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಲು ಕ್ರಮವಹಿಸುತ್ತೇನೆ ಎಂದು ಹೇಳಿದರು.</p>.<p>ಉಪಾಧ್ಯಕ್ಷ ಗಾಣಕಲ್ ರೇವಣಸಿದ್ದಯ್ಯ, ಸದಸ್ಯರಾದ ಡಿ. ಲಕ್ಷ್ಮಣ್, ವೆಂಕಟೇಶಯ್ಯ, ಗೌರಮ್ಮ, ಪವಿತ್ರಾ, ಸುಕನ್ಯಾ, ಮಮತಾ, ಕೆ.ಎಂ. ದೇವರಾಜು, ಪಿಡಿಒ ಮಹೇಶ್, ಕಾರ್ಯದರ್ಶಿ ಸೀನಪ್ಪ, ನರಸಿಂಹಯ್ಯ, ಪುರಸಭೆ ಮಾಜಿ ಅಧ್ಯಕ್ಷೆ ನೇತ್ರಾವತಿ, ಜೆಡಿಎಸ್ ಮುಖಂಡರಾದ ಸೋಮೇಗೌಡ, ಶೇಷಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ:</strong> ಗ್ರಾಮ ಪಂಚಾಯಿತಿಗಳು ಮಿನಿ ಸರ್ಕಾರವಿದ್ದಂತೆ. ಪಂಚಾಯಿತಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿದರೆ ಸರ್ಕಾರ ಮಾಡಬಹುದಾದ ಅನೇಕ ಕಾಮಗಾರಿಗಳನ್ನು ಪಂಚಾಯಿತಿ ಮೂಲಕವೂಮಾಡಬಹುದು ಎಂದು ಶಾಸಕ ಎ. ಮಂಜುನಾಥ್<br />ಅಭಿಪ್ರಾಯಪಟ್ಟರು.</p>.<p>ಹೋಬಳಿಯ ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಸಲ್ಲದು. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಸಂದರ್ಭದಲ್ಲಿನ ರಾಜಕೀಯ ಮರೆತು ಪಂಚಾಯಿತಿ ವ್ಯಾಪ್ತಿಯ ಹಳ್ಳಿಯ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಮತ್ತು ಪಂಚಾಯಿತಿಯ ಸೌಲಭ್ಯ ತಲುಪಿಸುವ ಕೆಲಸ ಆಗಬೇಕು ಎಂದರು.</p>.<p>ಅಧ್ಯಕ್ಷೆ ಸುಮತಿ ನಾಗರಾಜು ಮಾತನಾಡಿ, ನನ್ನ ಮೇಲೆ ವಿಶ್ವಾಸವಿಟ್ಟು ಶಾಸಕರು ಅಧ್ಯಕ್ಷೆಯಾಗಿ ಆಯ್ಕೆ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತ್ತು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಲು ಕ್ರಮವಹಿಸುತ್ತೇನೆ ಎಂದು ಹೇಳಿದರು.</p>.<p>ಉಪಾಧ್ಯಕ್ಷ ಗಾಣಕಲ್ ರೇವಣಸಿದ್ದಯ್ಯ, ಸದಸ್ಯರಾದ ಡಿ. ಲಕ್ಷ್ಮಣ್, ವೆಂಕಟೇಶಯ್ಯ, ಗೌರಮ್ಮ, ಪವಿತ್ರಾ, ಸುಕನ್ಯಾ, ಮಮತಾ, ಕೆ.ಎಂ. ದೇವರಾಜು, ಪಿಡಿಒ ಮಹೇಶ್, ಕಾರ್ಯದರ್ಶಿ ಸೀನಪ್ಪ, ನರಸಿಂಹಯ್ಯ, ಪುರಸಭೆ ಮಾಜಿ ಅಧ್ಯಕ್ಷೆ ನೇತ್ರಾವತಿ, ಜೆಡಿಎಸ್ ಮುಖಂಡರಾದ ಸೋಮೇಗೌಡ, ಶೇಷಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>